Select Your Language

Notifications

webdunia
webdunia
webdunia
webdunia

ಶಾಸಕ ಸೋಮಶೇಖರ್ ರೆಡ್ಡಿ ಕಾಂಗ್ರೆಸ್ ಒಲವು

ಶಾಸಕ ಸೋಮಶೇಖರ್ ರೆಡ್ಡಿ ಕಾಂಗ್ರೆಸ್ ಒಲವು
ಬೆಂಗಳೂರು , ಶುಕ್ರವಾರ, 18 ಫೆಬ್ರವರಿ 2022 (15:09 IST)
ಕಾಂಗ್ರೆಸ್ ಗೆ ಬರ್ತೀರಾ ಎಂದು ಸಿದ್ದರಾಮಯ್ಯ ಕೇಳಿದ್ದಾರೆ ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿನ್ನೆ ಸದನದಲ್ಲಿ ಕಾಂಗ್ರೆಸ್ ನವರು ಧರಣಿ ಮಾಡ್ತಿದ್ದ ವೇಳೆ ನಾನು ಮರೆತು ಬಿಟ್ಟು ಹೋಗಿದ್ದ ನನ್ನ ಫೈಲ್ ತರಲು ಹೋಗಿದ್ದಾಗ ಸಿದ್ದರಾಮಯ್ಯ ಅವರು ಕರೆದು ಕಾಂಗ್ರೆಸ್ ಗೆ ಬರ್ತೀರಾ ಅಂತ ಕೇಳಿದ್ರು, ಆಗ ನಾನು ಸಿದ್ಧರಾಮಯ್ಯ ಅವರಿಗೆ ನನ್ನ ತಮ್ಮನನ್ನ ಕೇಳುತ್ತೇನೆ ಎಂದು ಹೇಳಿದ್ದೇನೆ ಎಂದರು.
ಕಾಂಗ್ರೆಸ್‌ನವರು ನಮಗೆ ಸಾಕಷ್ಟು ಕಿರುಕುಳ ಕೊಟ್ಟವರು. ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿಜೆಪಿಯಲ್ಲೇ ಉಳಿಯುತ್ತೇವೆ. ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ಆಮಿಷ ಒಡ್ಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪ ರಾಜೀನಾಮೆ ಕೊಡೋದಿಲ್ಲ