Webdunia - Bharat's app for daily news and videos

Install App

ಮುಂಬೈನಲ್ಲಿ ಶಾಸಕ ಉಮೇಶ್ ಜಾಧವ ಪ್ರತ್ಯಕ್ಷ

Webdunia
ಮಂಗಳವಾರ, 15 ಜನವರಿ 2019 (17:42 IST)
ಕಳೆದ ಮೂರ್ನಾಲ್ಕು ದಿನಗಳಿಂದ ಯಾರ ಕೈಗೂ ಸಿಗದಿದ್ದ ಕಲಬುರ್ಗಿ ಜಿಲ್ಲೆ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಮುಂಬೈಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.

ಮಹಾರಾಷ್ಟ್ರದ ಪೌರಾದೇವಿ ಕ್ಷೇತ್ರದಲ್ಲಿ ಬಂಜಾರ ಸಮುದಾಯದ ಧರ್ಮಗುರು ರಾಮರಾವ್ ಮಹಾರಾಜ್ ಅವರ ಆಶೀರ್ವಾದ ಪಡೆದ ನಂತರ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ. ಅಪರೇಷನ್ ಕಮಲ ಎಂದೇನು ಇಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲಿನ ಬೇಜಾರಿನಿಂದ ಉಮೇಶ್ ಜಾಧವ್ ಈ ರೀತಿ ಮಾಡುತ್ತಿದ್ದಾರೆ ಎಂದು ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಸ್ಪಷ್ಟಪಡಿಸಿದ್ದಾರೆ.

ಇನ್ನೆರಡು ದಿನಗಳೊಳಗಾಗಿ ಕಲಬುರ್ಗಿಗೆ ಆಗಮಿಸುವ ಸಾಧ್ಯತೆಗಳಿದ್ದು, ಬೆಂಬಲಿಗರ ಜೊತೆ ಸಭೆ ನಡೆಸಿದ ನಂತರ ಉಮೇಶ್ ಜಾಧವ್ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಚಿಂಚೋಳಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಪೂರಕವಾಗಿ, ಬೆಂಬಲಿಗರ ಅಭಿಪ್ರಾಯದಂತೆ ಅವರು ಮುಂದಿನ ಹೆಜ್ಜೆ ಇಡಲಿದ್ದಾರೆ. ಕೆಲವೇ ದಿನಗಳಲ್ಲಿ ಇದೆಲ್ಲಕ್ಕೂ ಉತ್ತರ ಸಿಗಲಿದೆ ಎಂದು ರಾಮಚಂದ್ರ ಜಾಧವ್ ತಿಳಿಸಿದ್ದಾರೆ.

ಉಮೇಶ್ ಜಾಧವ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಜಾಧವ್ ಬೆಂಬಲಿಗರೂ ಕಲಬುರ್ಗಿಯ ಬೇಂದ್ರೆ ನಗರದಲ್ಲಿರುವ ಅವರ ಮನೆಗೆ ಬೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಚರ್ಚಿಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments