Select Your Language

Notifications

webdunia
webdunia
webdunia
webdunia

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

MLA Vinay Kulkarni
Photo Credit X
ಧಾರವಾಡ:  ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿ ಅವರು 6  ವರ್ಷಗಳ ಬಳಿಕ ಧಾರವಾಡಕ್ಕೆ ಪ್ರವೇಶ ಮಾಡಿದ್ದಾರೆ.   

ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಅಲ್ಲಿಂದ ನೇರವಾಗಿ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಬಂದ ಶಾಸಕ ವಿನಯ್ ಅವರನ್ನು ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಮಾಡಿದರು. 

ಮುರುಘೇಂದ್ರ ಮಹಾಶಿವಯೋಗಿಗಳ ಹಾಗೂ ಮೃತ್ಯುಂಜಯಪ್ಪಗಳ ಗದ್ದುಗೆಗೆ ಶಾಸಕ ವಿನಯ್ ಪೂಜೆ ಸಲ್ಲಿಸಿದರು. ಅವರ ಧರ್ಮಪತ್ನಿ ಶಿವಲೀಲಾ ಕುಲಕರ್ಣಿ, ಮಕ್ಕಳಾದ ವೈಶಾಲಿ, ದೀಪಾಲಿ ಹಾಗೂ ಹೇಮಂತ್ ಪೂಜೆಯಲ್ಲಿ ಭಾಗಿಯಾಗಿದ್ದರು.

ಇನ್ನೂ ವಿನಯ್ ಕುಲಕರ್ಣಿ ಅವರು ಈ ಸಂದರ್ಭದಲ್ಲಿ ಯಾವುದೇ ಜಯಘೋಷಣೆಗಳನ್ನು ಹಾಕಬಾರದು ಹಾಗೂ ಮೆರವಣಿಗೆ ಮಾಡಬಾರದು ಎಂಬ ಷರತ್ತನ್ನು ಹಾಕಿದ್ದರು. 

ನಂತರ ಶಿವಗಿರಿಯಲ್ಲಿರುವ ತಮ್ಮ ಮನೆಗೆ ಆಗಮಿಸಿದ ವಿನಯ್ ಅವರನ್ನು ಬೆಂಬಲಿಗರು ಸಂತಸದಿಂದ ಬರಮಾಡಿಕೊಂಡರು.  

ರಕ್ಷಾ ಬಂಧನದ ದಿನವೇ ವಿನಯ್ ಅವರು ಧಾರವಾಡಕ್ಕೆ ಬಂದಿದ್ದರಿಂದ ಅನೇಕರು ವಿನಯ್ ಅವರಿಗೆ ರಾಕಿ ಕಟ್ಟಿದರು. ಈ ವೇಳೆ ಮಾತನಾಡಿದ ಶಾಸಕ ವಿನಯ್ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ಕ್ಷೇತ್ರ ಅಭಿವೃದ್ಧಿ ಕುರಿತು ಮಾತನಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ