ಜೋಡೆತ್ತಿನ ಬಂಡಿ ಓಡಿಸಿದ ಶಾಸಕ

Webdunia
ಶನಿವಾರ, 15 ಫೆಬ್ರವರಿ 2020 (18:30 IST)
ಜೋಡೆತ್ತಿನ ಬಂಡಿ ಓಡಿಸಿ ಶಾಸಕ ನೆಹರು ಗಮನ ಸೆಳೆದಿದ್ದಾರೆ.

ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ ಜಾತ್ರೆಯ ಕಲಾಜಾಥಾ ನೋಡುಗರ ಗಮನ ಸೆಳೆಯಿತು. ಮುರುಘಾಮಠದ ಆವರಣದಲ್ಲಿ ಕಲಾಜಾಥಾಕ್ಕೆ ಚಾಲನೆ ನೀಡಿದ್ರು ಶಾಸಕ ನೆಹರು ಓಲೇಕಾರ. ಜೋಡೆತ್ತಿನ ಬಂಡಿ ಓಡಿಸುವುದರ ಮೂಲಕ ಚಾಲನೆ ನೀಡಿದ್ದು ವಿಶೇಷವಾಗಿತ್ತು.

ಜಾನಪದ ಜಾತ್ರೆಯ ಮೆರವಣಿಗೆಯಲ್ಲಿ 18ಕ್ಕೂ ಹೆಚ್ಚು ಕಲಾ ತಂಡಗಳು, ಯುವಕ ಸಂಘಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ದೇಶಿ ಪರಂಪರೆಯ ವೈಭವ ಸಾರಿದರು.

ಪಾರಂಪರಿಕ ಕಹಳೆ ವಾದ್ಯಗಳನ್ನು ಊದುವುದರೊಂದಿಗೆ ಆರಂಭಿಸಲಾದ ಜಾನಪದ ಜಾತ್ರೆಯ ಮೆರವಣಿಗೆಯುದ್ಧಕ್ಕೂ ವೈವಿಧ್ಯಮಯ ದೇಶಿ ವಾದ್ಯಗಳ ನಿನಾದಾ, ಜನಪದ ಕುಣಿತಗಳು, ಕೋಲಾಟ, ಡೊಳ್ಳು ಕುಣಿತ, ಕರಡಿಮಜಲು, ಹೆಜ್ಜೆಮೇಳ, ನಂದಿಕೋಲು ಕುಣಿತ, ನವಿಲು ಕುಣಿತ, ಜಗ್ಗಲಿಗೆ, ನಗಾರಿ ಹೀಗೆ ಹಲವು ಬಗೆಯ ಗ್ರಾಮೀಣ ಸೊಗಡಿನ ಕಲೆಗಳ ಅನಾವರಣ ನೋಡುಗರಿಗೆ ರೋಮಾಂಚನಗೊಳಿಸಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments