Webdunia - Bharat's app for daily news and videos

Install App

ಮೈತ್ರಿ ಸರಕಾರಕ್ಕೆ ಶಾಕ್: ಕೈ ಕೊಟ್ಟ ಶಾಸಕರು!

Webdunia
ಬುಧವಾರ, 6 ಫೆಬ್ರವರಿ 2019 (21:23 IST)
ಮೈತ್ರಿ ಸರಕಾರಕ್ಕೆ ಶಾಕ್ ಬಿದ್ದಂತಾಗಿದೆ. ಶಾಸಕರಿಗೆ ವಿಪ್ ಜಾರಿ ಮಾಡಿದ್ದರೂ ಅದನ್ನು ಲೆಕ್ಕಿಸದೇ 9 ಶಾಸಕರು ಸದನಕ್ಕೆ ಗೈರಾಗಿದ್ದಾರೆ. ಇದರಿಂದಾಗಿ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದೆಯಾ? ಎನ್ನುವ ಚರ್ಚೆ ಶುರುವಾಗಿದೆ.

ಸದನಕ್ಕೆ ಗೈರು ಹಾಜರಾಗಿರುವ ಶಾಸಕರು ಕಾಂಗ್ರೆಸ್  ಮುಖಂಡರಿಗೆ ಸೆಡ್ಡು ಹೊಡೆದಿದ್ದಾರೆ.  ಇದರಿಂದಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ಬಿಸಿತುಪ್ಪದಂತಾಗಿದೆ.

ಕಾಂಗ್ರೆಸ್ ಅತೃಪ್ತ ಶಾಸಕರ ಗೈರು ಹಾಜರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಳ್ಳುವ ಭೀತಿಗೆ ಸಿಲುಕಿಸಿದೆ. ದೋಸ್ತಿ ಪಕ್ಷಗಳ ನಾಯಕರ ನಿದ್ದೆಗೆಡಿಸಿದೆ. ಸದ್ದಿಲ್ಲದೆ ಬಿಜೆಪಿ ನಾಯಕರು `ಆಪರೇಷನ್ ಲೋಟಸ್ ರಾಕೆಟ್`ಯಡಿ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವಲ್ಲಿ ಹಾಗೂ ಸದನಕ್ಕೆ ಗೈರು ಹಾಜರು ಮಾಡಿಸುವಲ್ಲಿ ಬಹುತೇಕ ಯಶಸ್ಸು ಸಾಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments