Select Your Language

Notifications

webdunia
webdunia
webdunia
webdunia

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ: ಮಹಾಂತೇಶ್ ಕವಟಗಿಮಠ

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ: ಮಹಾಂತೇಶ್ ಕವಟಗಿಮಠ
ಬೆಳಗಾವಿ , ಶನಿವಾರ, 10 ಡಿಸೆಂಬರ್ 2016 (11:43 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ವೇದಿಕೆಗಳಲ್ಲಿ ಕೆಲಸ ಮಾಡಲಿ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸಂಘಟಿಸುವ ವಿಚಾರದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪಕ್ಷ ಸಂಘಟನೆ ಪಕ್ಷದ ವೇದಿಕೆಯಲ್ಲೇ ಆಗಲಿ. ಅದು ಬಿಟ್ಟು ಬೇರೆ ಹೆಸರಿನಲ್ಲಿ ಸಂಘಟನೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕೆ.ಎಸ್.ಈಶ್ವರಪ್ಪ ವಿರುದ್ಧ ಕೇಂದ್ರ ನಾಯಕರು ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ಅವರಿಗೆ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಾಸನ: ಕಸದ ಬುಟ್ಟಿಯಲ್ಲಿ ಹಳೆ ನೋಟು ದಹನ