Webdunia - Bharat's app for daily news and videos

Install App

‘ನಾನು ಯಾರೂಂತ ತೋರಿಸ್ಲಾ ನಿಂಗೆ?’ ಮಲೆಮಹದೇಶ್ವರ ಬೆಟ್ಟದಲ್ಲಿ ಪಿಎಸ್ಐ ಮೇಲೆ ಎಂಎಲ್ ಸಿ ಗರಂ

Webdunia
ಶನಿವಾರ, 1 ಡಿಸೆಂಬರ್ 2018 (10:29 IST)
ಬೆಂಗಳೂರು: ನಿನ್ನೆ ಸಿಎಂ ಕುಮಾರಸ್ವಾಮಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ವಸತಿ ಸಮುಚ್ಚಯವೊಂದನ್ನು ಉದ್ಘಾಟಿಸುವ ಕಾರ್ಯಕ್ರಮವಿತ್ತು. ಈ ವೇಳೆ ಅಲ್ಲಿಗೆ ಬಂದಿದ್ದ ಎಂಎಲ್ ಸಿ ಮರಿತಿಬ್ಬೇಗೌಡ ಪಿಎಸ್ಐ ಒಬ್ಬರ ಮೇಲೆ ಆವಾಜ್ ಹಾಕಿದ ಘಟನೆ ನಡೆದಿದೆ.


ಸಿಎಂ ಕಾರ್ಯಕ್ರಮಕ್ಕೆ ಕೊಂಚ ತಡವಾಗಿ ಆಗಮಿಸಿದ ಎಂಎಲ್ ಸಿ ಮರಿತಿಬ್ಬೇಗೌಡರ ಕಾರನ್ನು ಭದ್ರತೆ ಹೊಣೆ ಹೊತ್ತಿದ್ದ ಪಿಎಸ್ಐ ಬಸವರಾಜು ನೇತೃತ್ವದ ತಂಡ ತಡೆಹಿಡಿಯಿತು. ಇದರಿಂದ ಕೆಂಡಾಮಂಡಲರಾದ ಶಾಸಕರು ನಾನು ಯಾರೂಂತ ಗೊತ್ತಿಲ್ವಾ ನಿಂಗೆ? ತೋರಿಸ್ಲಾ ನಾನು ಯಾರೂಂತ. ಎಸ್ ಪಿ, ಐಜಿ ಈಗಲೇ ಇಲ್ಲಿಗೆ ಬರಲಿ. ಈವತ್ತು ಇಲ್ಲಿ ಇತಿಹಾಸ ಆಗ್ಬೇಕು. ನಿನ್ನ ಸಸ್ಪೆಂಡ್ ಮಾಡಿಸ್ತೀನಿ ಎಂದು ಕೂಗಾಡಿದರು.

ಈ ವೇಳೆಗೆ ಅಲ್ಲಿಗೆ ಬಂದ ಸಚಿವ ಸಾ ರಾ ಮಹೇಶ್ ಮರಿತಿಬ್ಬೇಗೌಡರನ್ನು ಸಮಾಧಾನಿಸಿ ವೇದಿಕೆಗೆ ಕರೆದೊಯ್ಯಲು ಯತ್ನಿಸಿದರು. ಆಗಲೂ ಸಮಾಧಾನಗೊಳ್ಳದ ಶಾಸಕರು ಪಿಎಸ್ಐ ಅಮಾನತಿಗೆ ಪಟ್ಟು ಹಿಡಿದಿದ್ದರು.

ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿರುವ ಎಂಎಲ್ ಸಿ ಮರಿತಿಬ್ಬೇಗೌಡ, ನಾನು ಎಂಎಲ್ ಸಿ, ಕಾರ್ಯಕ್ರಮಕ್ಕೆ ಹೋಗಬೇಕು ಎಂದು ಎಷ್ಟೇ ಹೇಳಿದರೂ ಆ ಅಧಿಕಾರಿ ಕೇಳಲಿಲ್ಲ. ಅರ್ಧಗಂಟೆ ಕಾಯಿಸಿದರು. ಅದಕ್ಕೆ ನಾನು ನಿಮ್ಮ ಮೇಲಧಿಕಾರಿಗಳ ನಂಬರ್ ಕೊಡಿ ಎಂದು ಕೇಳಿದೆ ಅಷ್ಟೇ. ಯಾರಿಗೂ ನಾನು ಆವಾಜ್ ಹಾಕಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments