ಸಚಿವ ಸ್ಥಾನ ನೀಡದಿದ್ರೆ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ?: ರಘು ಆಚಾರ್

Webdunia
ಶುಕ್ರವಾರ, 17 ಜೂನ್ 2016 (21:02 IST)
ಸಂಪುಟ ಪುನಾರಚನೆ ಸಂದರ್ಭದಲ್ಲಿ ನನ್ನ ಅನುಭವ ಅರ್ಹತೆ ನೋಡಿ ಸಚಿವ ಸ್ಥಾನ ನೀಡದಿದ್ರೆ ಮುಂದಿನ ವಿಚಾರ ಮಾಡಬೇಕಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಸಿಎಂ ಸಿದ್ದರಾಮಯ್ಯಗೆ ನೇರ ಎಚ್ಚರಿಕೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಕ್ಕಾಗಿ ಕಾಯುತ್ತೇನೆ. ನಂತರ ವರಿಷ್ಠರನ್ನು ಭೇಟಿ ಮಾಡಿ ನನ್ನ ಮನದ ಬಯಕೆಯನ್ನು ತಿಳಿಸುತ್ತೇನೆ ಕೊನೆಗೂ ನನಗೆ ಸಚಿವ ಸ್ಥಾನ ನೀಡದಿದ್ರೆ ಜನರ ಬಳಿ ಹೋಗಿ ಜನರ ಅಭಿಪ್ರಾಯದಂತೆ ನಡೆದುಕೊಳ್ಳುತ್ತೇನೆ ಎಂದು ಪಕ್ಷ ಬಿಡುವ ಬಗ್ಗೆ ಪರೋಕ್ಷ ವಾರ್ನಿಂಗ್ ನೀಡಿದ್ದಾರೆ.
 
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿದ್ದರಿಂದ ಮತದಾರನ ಅಭಿಪ್ರಾಯ ಪಡೆದು ಮುಂದಿನ ರಾಜಕೀಯ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ ಎಂದು ರಘು ಆಚಾರ್ ತಿಳಿಸಿದ್ದಾರೆ.
 
 ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಸಚಿವರಿಗೆ ಎಲ್ಲಿ ತಮ್ಮ ಸ್ಥಾನ ಹೋಗುವುದೋ ಎನ್ನುವ ಆತಂಕ ಆವರಿಸಿದ್ದರೆ, ಕೆಲ ಶಾಸಕರಿಗೆ ಕೊನೆಯ ಎರಡು ವರ್ಷವಾದರೂ ಸಚಿವರಾಗುವ ಯೋಗ ದೊರೆಯಲಿ ಎಂದು ಹರಸಾಹಸ ಪಡುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments