Publish Date: Fri, 18 Aug 2017 (19:21 IST)
Updated Date: Fri, 18 Aug 2017 (19:25 IST)
ಸಿಎಂ ಸಿದ್ದರಾಮಯ್ಯ ಆಪ್ತ, ಬಲಗೈ ಬಂಟ ಸಿಎಂ ಇಬ್ರಾಹಿಂಗೆ ವಿಧಾನಪರಿಷತ್ ಟಿಕೆಟ್ ನೀಡಿರುವ ಬಗ್ಗೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ
ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂಗೆ ಟಿಕೆಟ್ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಸ್ಥಾನ ಪಡೆದಿರುವ ಇಬ್ರಾಹಿಂ, ವಿಧಾನಪರಿಷತ್ನಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ಸಿಎಂ ಸಿದ್ದರಾಮಯ್ಯ ಬಯಕೆಯಾಗಿತ್ತು. ಕೆಲ ದಿನಗಳ ಹಿಂದೆ ಸಿಎಂ, ಹೈಕಮಾಂಡ್ ಮುಂದೆ ಇಬ್ರಾಹಿಂಗೆ ಟಿಕೆಟ್ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.
ಸಿಎಂ ಸಿದ್ದರಾಮಯ್ಯ ಮನವಿಗೆ ಮಣೆ ಹಾಕಿರುವ ಹೈಕಮಾಂಡ್ ಇಂದು, ಇಬ್ರಾಹಿಂ ಅವರಿಗೆ ಟಿಕೆಟ್ ನೀಡಿರುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.