ಮೊಬೈಲ್ ಕಳ್ಳತನವಾದರೆ ಎಫ್.ಐ.ಆರ್ ಕಡ್ಡಾಯ...!!!

Webdunia
ಮಂಗಳವಾರ, 26 ಜುಲೈ 2022 (20:27 IST)
ನಗರದಲ್ಲಿ ರಾಬರಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ನಗರ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.
 
ಪೊಲೀಸ್ ಠಾಣೆಗೆ ಮೊಬೈಲ್ ಕದ್ದಿರುವ ಬಗ್ಗೆ ದೂರು ಕೊಡಲು ಬಂದರೆ ಕಡ್ಡಾಯವಾಗಿ ಎಫ್‌ಐಆರ್ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
 
ಮೊಬೈಲ್ ರಾಬರಿ ನಡೆದರೆ ಎಫ್‌ಐಆರ್ ಕಡ್ಡಾಯ: ಬೆಂಗಳೂರು ಪೊಲೀಸ್​ ಕಮಿಷನರ್ ಖಡಕ್ ಸೂಚನೆ
ಈ ಬಗ್ಗೆ ವಾರ್ಷಿಕ ಸಭೆಯಲ್ಲಿ ಚರ್ಚಿಸಲಾಗಿದ್ದು, ಮೊಬೈಲ್ ಕಳೆದು ಹೋದರೆ ಇ-ಲಾಸ್ ಸಾಫ್ಟ್​​ವೇರ್​ನಲ್ಲಿ ದೂರು ನೀಡಬಹುದು. ಆದರೆ, ಮೊಬೈಲ್ ರಾಬರಿ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ದೂರು ನೀಡಬಹುದು. ಪೊಲೀಸರು ಇಂತಹ ಪ್ರಕರಣಗಳಲ್ಲಿ ಶೀಘ್ರವೇ ಎಫ್‌ಐಆರ್ ದಾಖಲಿಸಲೇಬೇಕು ಎಂದು ತಾಕೀತು ಮಾಡಿದರು.
 
ಇತ್ತೀಚೆಗೆ ನಗರದಲ್ಲಿ ಮೊಬೈಲ್ ರಾಬರಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಅನೇಕರು ಇ-ಲಾಸ್​ ಮುಖಾಂತರ ದೂರುಗಳು ಬರುತ್ತಿವೆ. ಆದರೆ, ಈ ರೀತಿಯ ಪ್ರಕರಣಗಳಲ್ಲಿ ಪೊಲೀಸ್ ಠಾಣೆಗೆ ಸಾರ್ವಜನಿಕರು ನೇರವಾಗಿ ಬಂದ ದೂರು ನೀಡಬೇಕು. ಅಲ್ಲದೇ, ಇಂತಹ ದೂರುಗಳ ಬಗ್ಗೆ ಪೊಲೀಸ್​ ಸಿಬ್ಬಂದಿ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಪೊಲೀಸ್​ ಆಯುಕ್ತರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಮಳೆಯ ಸಾಧ್ಯತೆ ಕಡಿಮೆ, ಆದರೆ ಈ ಬದಲಾವಣೆ ಗಮನಿಸಿ

ಸಂಜಯ್ ಗಾಂಧಿಯಿಂದ ಅಜಿತ್ ಪವಾರ್‌ವರೆಗೆ, ವಿಮಾನ ದುರಂತದಲ್ಲಿ ಮಡಿದವರ ಮಾಹಿತಿ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶಿವಮೊಗ್ಗದ ನಂದಿನಿ ಡೈರಿಯಿಂದ ಹಾಲಿನ ಪ್ಯಾಕೆಟ್‌ಗಳು ಕಳವು

Ajit Pawar No More: ರಾಜ್ಯ ರಾಜಕೀಯದಲ್ಲಿ ಬಲಿಷ್ಠ ನಾಯಕನ ಹಾದಿ ಎಂದೆಂದಿಗೂ ಇತಿಹಾಸ

ಮುಂದಿನ ಸುದ್ದಿ
Show comments