Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ: ಮೊಬೈಲ್, ಗಾಂಜಾ, ಆಯುಧಗಳು ವಶ!

Webdunia
ಶನಿವಾರ, 10 ಜುಲೈ 2021 (09:25 IST)
ಬೆಂಗಳೂರು (ಜುಲೈ 10); ನಗರದಲ್ಲಿ ಬೀಡು ಬಿಟ್ಟಿರುವ ಮಾದಕ ವಸ್ತುಗಳ ಮಾರಾಟ ಜಾಲವನ್ನು ಬೇಧಿಸುವ ಸಲುವಾಗಿ ಸಿಸಿಬಿ ಪೊಲೀಸರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಕಳೆದ 6-7 ತಿಂಗಳಲ್ಲಿ ಸ್ಯಾಂಡಲ್ವುಡ್ ನಟಿಯರು ಸೇರಿದಂತೆ ಈ ಜಾಲದ ಭಾಗವಾಗಿದ್ದ ಎಲ್ಲಾ ಪೆಡ್ಲರ್ಗಳನ್ನು ಹೆಡೆಮುರಿಕಟ್ಟಿ ಜೈಲಿಗೆ ಬಿಟ್ಟುಬಂದಿದ್ದಾರೆ.

















 ಆದರೆ, ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ವಿರುದ್ಧವಾಗಿ ಕಾರ್ಯಚರಣೆ ನಡೆಸುತ್ತಿದ್ದರೆ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಜೈಲಿನಲ್ಲಿ ಪೊಲೀಸರೇ ಮಾದಕ ಜಾಲವನ್ನು ನಡೆಸುತ್ತಿರುವುದು ಹೇಯ ಕೃತ್ಯವಾಗಿದೆ. ಇಂದು ಬೆಳ್ಳಂ ಬೆಳಗ್ಗೆಯೇ ಜೈಲಿಗೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಗಾಂಜಾ ಸೇರಿದಂತೆ ಮೊಬೈಲ್ ಹಾಗೂ ಅನೇಕ ಮಾರಕ ವಸ್ತುಗಳನ್ನು ಖೈದಿಗಳಿಂದ ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಜೈಲಿನಲ್ಲಿ ಮಾದಕ ವಸ್ತುವಾದ ಗಾಂಜಾ ಮತ್ತು ಮೊಬೈಲ್ ಬಳಕೆ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದವು, ಅಲ್ಲದೆ, ಖೈದಿಗಳು ಮಾರಕ ಅಸ್ತ್ರಗಳನ್ನೂ ಬಳಸುತ್ತಿದ್ದಾರೆ ಎಂಬ ದೂರು ಇತ್ತು. ಹೀಗಾಗಿ ಖಚಿತ ಮಾಹಿತಿಯ ಮೇರೆ ಸಿಸಿಬಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ 5 ಗಂಟೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು ನೂರಕ್ಕೂ ಅಧಿಕ ಸಿಬ್ಬಂದಿ ಹಾಗೂ ಶ್ವಾನದಳ ಜೊತೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಗಾಂಜಾ, ಮೊಬೈಲ್ ಸೇರಿದಂತೆ ಅನೇಕ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಜೈಲಿನ ಮೂಲೇ ಮೂಲೇ ಪರಿಶೀಲನೆ ನಡೆಸಿರುವ ಸಿಸಿಬಿ ಪೊಲೀಸರು. ಈ ವೇಳೆ ಜೈಲಿನ ವಸ್ತುಗಳನ್ನೆ ಆಯುಧಗಳನ್ನಾಗಿ ಮಾಡಿಕೊಂಡಿರುವ ಖೈದಿಗಳ ಬಳಿಯಿಂದ ಎಲ್ಲಾ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.ಖೈದಿಗಳು ಜೈಲಿನಲ್ಲಿ ನೀಡುವ ತಟ್ಟೆ, ಲೋಟ, ಕಬ್ಬಿಣದ ಸಲಾಕೆಗಳನ್ನು ಆಯುಧಗಳನ್ನಾಗಿ ಮಾಡಿಕೊಂಡಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ರಾಮನಗರ ಜೈಲಿನ ಮೇಲೂ ಸಿಸಿಬಿ ಪೊಲೀಸರಿಂದ ದಾಳಿ ನಡೆದಿತ್ತು. ಆದರೆ,
ಪರಪ್ಪನ ಅಗ್ರಹಾರದ ಜೈಲಿನ ಮೇಲಿನ ದಾಳಿ ಅನೇಕರ ಹುಬ್ಬೇರುವಂತೆ ಮಾಡಿದ್ದು, ಸಿಸಿಬಿ ಅಧಿಕಾರಿಗಳು ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ