Daily Horoscope

ಡ್ರಗ್ಸ್ ಕೇಸಲ್ಲಿ ಸಿಕ್ಕಿಬಿದ್ದ ಮಾಡೆಲ್: ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದ ಸೋನಿಯಾ!

Webdunia
ಸೋಮವಾರ, 30 ಆಗಸ್ಟ್ 2021 (17:00 IST)
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರೂಪದರ್ಶಿ ಸೋನಿಯಾ ಅಗರ್ ವಾಲ್ ಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದರು ಎಂದು ತಿ
ಳಿದು ಬಂದಿದೆ.
ಸೋಮವಾರ ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಾಗ ಸೋನಿಯಾ ಅಗರ್ ವಾಲ್ ಮನೆಯಲ್ಲಿ ಇರಲಿಲ್ಲ.
ಭಾನುವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದರು. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಿರಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದರು. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಳು.  
ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿತ್ತು. ನಂತರ ತನಿಖೆ ನಡೆಸಿದ ಪೊಲೀಸರಿಗೆ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ  ಸೋನಿಯಾ ಇರುವುದು ಪತ್ತೆ ಹಚ್ಚಿ,  ಆಕೆಯನ್ನು ವಶಕ್ಕೆ ಪಡೆಯಲು ತೆರಳಿದರು. ಈ ವೇಳೆ ಪೊಲೀಸರು ಬರುತ್ತಿದ್ದಂತೆ ವಾಶ್ ರೂಮ್ ನಲ್ಲಿ ಅಡಗಿ ಕುಳಿತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಮುಂದಿನ ಸುದ್ದಿ
Show comments