Publish Date: Fri, 17 Sep 2021 (21:47 IST)
Updated Date: Fri, 17 Sep 2021 (21:49 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ಕೆಆರ್ ಪುರ ಹಾಗೂ ಮಹದೇವಪುರ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಯಿತು. ಕೆಆರ್ ಪುರದ ಕೊತ್ತನೂರಿನಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜರವರು ಪ್ರತಿಜ್ಞಾವಿಧಿ ಬೋಧಿಸಿ ಮೋದಿಯವರ ಸಾಧನೆ ವೈಖರಿ ಜನರಿಗೆ ಮುಟ್ಟಿಸುವಂತೆ ತಿಳಿಸಿದರೆ ಇತ್ತ ಮಹದೇವಪುರ ವಿಧಾನಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ, ಬಿಬಿಎಂಪಿ ವಾರ್ಡ್ ನಲ್ಲಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಉಚಿತ ಲಸಿಕೆ ಕಾರ್ಯಕ್ರಮ, ಸ್ವಚ್ಛ ಭಾರತ, ಅನಾಥಶ್ರಮಕ್ಕೆ ಹಣ್ಣುಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.