Select Your Language

Notifications

webdunia
webdunia
webdunia
webdunia

ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ- ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್

ಮೈಸೂರು
ಮೈಸೂರು , ಮಂಗಳವಾರ, 2 ಜುಲೈ 2019 (10:27 IST)
ಮೈಸೂರು : ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ ಎಂದು ಬಿಜೆಪಿ ಪರ ಸಚಿವ ಜಿಟಿ ದೇವೇಗೌಡ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ, ಅಮಿತ್ ಶಾ ಕಾಶ್ಮೀರ, ಅಮೇರಿಕ ವಿಚಾರದಲ್ಲಿ ಮಗ್ನರಾಗಿದ್ದಾರೆ. ಅವರು ಸರ್ಕಾರಕ್ಕೆ ಅಭದ್ರತೆ ಸೃಷ್ಟಿಸೋ ಕೆಲಸ ಮಾಡ್ತಿಲ್ಲ. ಸರ್ಕಾರ ಬೀಳಿಸೋದು ಬಿಜೆಪಿ ರಾಜ್ಯ ನಾಯಕರ ಕೈಯಲ್ಲಿಲ್ಲ. ಬಿಜೆಪಿಯವರ ಮೇಲೆ ಯಾರೂ ಕೆಸರೆರಚೋ ಹಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ ಸಿಂಗ್ ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಜೆಡಿಎಸ್ ನ ಯಾವ ಶಾಸಕರೂ ರಾಜೀನಾಮೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಂದ ಸಾಲ ವಸೂಲಿಗೆ ಬೌನ್ಸರ್ ಗಳನ್ನು ನೇಮಿಸಿಕೊಳ್ಳಬಾರದು; ಬ್ಯಾಂಕುಗಳಿಗೆ ಆರ್.ಬಿ.ಐ. ಸೂಚನೆ