Webdunia - Bharat's app for daily news and videos

Install App

ನಾಳೆ ಉದ್ಯಾನನಗರಿಗೆ ಆಗಮಿಸಲಿರುವ ಮೋದಿ-ಏಂಜೆಲಾ: 23 ರಸ್ತೆಗಳ ಸಂಚಾರ ನಿಷೇಧ

Webdunia
ಸೋಮವಾರ, 5 ಅಕ್ಟೋಬರ್ 2015 (16:44 IST)
ಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರು ನಾಳೆ ಉದ್ಯಾನನಗರಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಗರದ 23 ಪ್ರಮುಖ ರಸ್ತೆಗಳ ಸಂಚಾರವನ್ನು ಸ್ಥಗಿತಗಳಿಸಲಾಗಿದೆ. 
 
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್, ನಾಳೆ ಪ್ರಧಾನಿ ಮೋದಿ ಹಾಗೂ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಅವರು ಆಗಮಿಸುತ್ತಿದ್ದಾರೆ. ಅಲ್ಲದೆ ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿರುವ ಭಾಷ್ ಕಂಪನಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಭೇಟಿಗೆ ಯಾವುದೇ ತೊಂದರೆಯಾಗದಂತೆ ನಗರದ 23 ರಸ್ತೆಗಳ ಸಂಚಾರವನ್ನು ಬೆಳಗ್ಗೆ 9 ಗಂಟಯಿಂದ ಸಂಜೆ 3 ಗಂಟೆ ವರೆಗೆ ಸ್ಥಗಿತಗೊಳಿಸುತ್ತಿದ್ದು, ಅದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು. 
 
ನಗರದ ಕೆ.ಕೆ.ರಸ್ತೆ, ಚೌಡಯ್ಯ ರಸ್ತೆ, ಹರಿಕೃಷ್ಣ ರಸ್ತೆ, ಚೌಡಯ್ಯ ರಸ್ತೆ, ಆಲಿ ಅಸಗರ್ ರಸ್ತೆ, ಕಸ್ತೂರ್ ಬಾ ರಸ್ತೆ, ವಿಠಲ್ ಮಲ್ಯ ರಸ್ತೆ, ಲ್ಯಾಂಗ್ ಫೋರ್ಡ್ ರಸ್ತೆ, ಮೈಕೋ ಇನ್ನರ್ ರೋಡ್, ಕೋರಮಂಗಲ ರಿಂಗ್ ರಸ್ತೆ, ಹೆಚ್ಎಎಲ್, ಟ್ರಿನಿಟಿ ರಸ್ತೆ ಹಾಗೂ ರಿಚ್ ಮಂಡ್ ರಸ್ತೆ ಸೇರಿದಂತೆ ಇತರೆ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟವನ್ನು ಒಂದು ದಿನದ ಮಟ್ಟಿಗೆ ನಿಷೇಧಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಷ್ ಕಂಪನಿಗೆ ಭೇಟಿ ನೀಡಿದ ಬಳಿಕ ನಗರದ ಲೀಲಾ ಪ್ಯಾಲೇಸ್‌ನಲ್ಲಿ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments