ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

Sampriya
ಮಂಗಳವಾರ, 21 ಅಕ್ಟೋಬರ್ 2025 (17:58 IST)
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಬೇಕಾದ ಹಣವನ್ನು ಸಂಸದರು ಕೇಂದ್ರದ ಬಳಿ ಕೇಳಲ್ಲ.  ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಅವನು ಕೂಡಾ ಕೇಂದ್ರದ ಬಳಿ ಬೇಡಿಕೆಯಿಡಕ್ಕ ಎಂದು ಸಿಎಂ ಸಿದ್ದರಾಮಯ್ಯ ಅಕ್ರೋಶ ಹೊರಹಾಕಿದ್ದಾರೆ. 

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು.

ಆ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಬೇಕಾದ ಹಣವನ್ನು ಸಂಸದರು ಕೇಂದ್ರದ ಬಳಿ ಕೇಳಲ್ಲ.  ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಹಾಗಾಗಿ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಎಂದು ಕರೆ ನೀಡಿದರು. 

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮೇಲೆ ದ್ವೇಷವಿದ್ದು, ಹಾಗಾಗಿ ರಾಜ್ಯಕ್ಕೆ ಹಣ ಬರಲ್ಲ ಎಂದರು. 

ನಾವು ಕೊಟ್ಟಿರುವ ತೆರಿಗೆ ಹಣವನ್ನು ಅವರು ವಾಪಾಸ್ ನೀಡಲ್ಲ.  ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ.

ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಟಾಂಗ್ ಕೊಟ್ಟರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments