Webdunia - Bharat's app for daily news and videos

Install App

ಮೋದಿ ಘೋಷಿಸಿದ ಪ್ಯಾಕೇಜ್ – ಬಿಜೆಪಿ ಸಂಸದ ಹೇಳಿದ್ದೇನು?

Webdunia
ಗುರುವಾರ, 14 ಮೇ 2020 (16:37 IST)
ಲಾಕ್ ಡೌನ್ ಮೂರನೇ ಹಂತ ಮುಕ್ತಾಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿರೋದಕ್ಕೆ ಬಿಜೆಪಿ ಸಂಸದ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿರುವ ಇಪ್ಪತ್ತು ಲಕ್ಷ ಕೋಟಿಯ ಪ್ಯಾಕೇಜ್
ಸ್ವಾವಲಂಬಿ ಭಾರತ ನಿರ್ಮಾಣ ಪ್ರಯತ್ನದ ಮೊದಲ ಹೆಜ್ಜೆ ಯಾಗಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ಕೋವಿಡ್ -19 ನಿಂದ ಕಂಗಾಲಾಗಿದ್ದ ದೇಶದ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ಜೊತೆ ಜೊತೆಗೆ ನಮ್ಮ ದೇಶದ ಆರ್ಥಿಕ ಜೀವನಾಡಿಯಾಗಿರುವ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಸಂದಿಗ್ಧದ ಪರಿಸ್ಥಿತಿಯಿಂದ ಪಾರು ಮಾಡುವತ್ತ  ಪ್ರಧಾನ ಮಂತ್ರಿಗಳು ಚಿತ್ತ ಹರಿಸಿದ್ದಾರೆ ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

20 ಲಕ್ಷ ಕೋಟಿ ಪ್ಯಾಕೇಜ್‌ನ ಮೊದಲ ಭಾಗ ಇದಾಗಿದ್ದು, ಮುಂದಿನ ಭಾಗಗಳಲ್ಲಿ ರೈತರನ್ನು ಒಳಗೊಂಡು ಎಲ್ಲಾ ವರ್ಗದ ಜನರಿಗೆ ಅನುಕೂಲ ದೊರೆಯುವ ನಿರೀಕ್ಷೆಯಿದೆ. ಸಾವಿರ ಮೈಲು ದೂರದ ಪ್ರಯಾಣವೇ ಆದರೂ ಕೂಡ ಮೊದಲ ಹೆಜ್ಜೆಯಿಂದಲೇ ಪ್ರಾರಂಭವಾಗಬೇಕು.

ಅಂತಹ ಸ್ವಾವಲಂಬಿ ಭಾರತದ ಪ್ರಯಾಣದಲ್ಲಿ ಪ್ಯಾಕೇಜ್ ಘೋಷಣೆ ಮೂಲಕ ಪ್ರಧಾನಿಗಳು ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ. ಕೇಂದ್ರ ಸರ್ಕಾರದ ಈ ಘೋಷಣೆಯನ್ನು  ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments