Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಯಿಂದ ಸರ್ವಾಧಿಕಾರಿಯ ವರ್ತನೆ: ಮಲ್ಲಿಕಾರ್ಜುನ್ ಖರ್ಗೆ ಕಿಡಿ

ಪ್ರಧಾನಿ ಮೋದಿ
ಕಲಬುರ್ಗಿ , ಸೋಮವಾರ, 26 ಡಿಸೆಂಬರ್ 2016 (12:31 IST)
ಕಪ್ಪು ಹಣ ಹಾಗೂ ಭಯೋತ್ಪಾದನೆ ತಡೆಗಟ್ಟಲು ಕೇಂದ್ರ ಸರಕಾರ ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿದೆ. ಹಾಗಾದರೇ, ಭಯೋತ್ಪಾದಕರಿಗೆ 2 ಸಾವಿರ ಮುಖಬೆಲೆಯ ನೋಟುಗಳು ಸಿಗುತ್ತಿಲ್ಲವೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದಾರೆ.
ಛಾಯಾಚಿತ್ರ ಪರಿಷತ್‌ನಲ್ಲಿ ಚಿತ್ರಕಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕೆ ಈ ಚಿತ್ರಗಳೇ ಸಾಕ್ಷಿ ಎಂದು ಹೇಳಿದರು.
 
ರಿಸರ್ವ್ ಬ್ಯಾಂಕ್ ಹಾಗೂ ಆರ್ಥಿಕ ತಜ್ಞರ ಜೊತೆ ಚರ್ಚಿಸಿ ಪೂರ್ವ ಸಿದ್ಧತೆಗಳೊಂದಿಗೆ ನೋಟ್ ಬ್ಯಾನ್ ನಿರ್ಧಾರವನ್ನು ಕೈಗೊಳ್ಳಬೇಕಿತ್ತು. ಆದರೆ, ಏಕಾಏಕಿ ನೋಟ್ ಬ್ಯಾನ್ ಮಾಡಿರುವುದರಿಂದ ಜನತೆ ಸಂಕಷ್ಟದ ಸ್ಥಿತಿ ಅನುಭವಿಸುತ್ತಿದೆ ಎಂದು ದೂರಿದರು.
 
ನೋಟ್ ಬ್ಯಾನ್‌ನಿಂದ ದೇಶದ ಜನತೆ ಎಟಿಎಂ ಕೇಂದ್ರಗಳ ಮುಂದೆ ಕ್ಯೂ ನಿಂತಿದ್ದಾರೆ. ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿ ತಾವು ಆಡಿದ್ದೆ ಆಟ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೊಸೆಯ ಕಿರುಕುಳಕ್ಕೆ ನೊಂದು ಆತ್ಮಹತ್ಯೆ: ಮೊಬೈಲ್‌ನಲ್ಲಿ ಸಾವಿನ ಚಿತ್ರೀಕರಣ