ಮೋದಿ ಭೇಟಿ ರದ್ದು ಮರಗಳ ಮಾರಣಹೋಮ ರದ್ದು

Webdunia
ಶುಕ್ರವಾರ, 4 ಮಾರ್ಚ್ 2022 (20:21 IST)
ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್‌ನಲ್ಲಿ ಬೆಂಗಳೂರು ಭೇಟಿ ರದ್ದುಗೊಳಿಸಿದ್ದರಿಂದ ನಾಲ್ಕು ಮರಗಳ ಜೀವ ಉಳಿಯಿತು ಎಂದು ಹೇಳಲಾಗಿದೆ.
 
ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಲಾ ಸ್ಕೂಲ್ ಅಫ್ ಇಂಡಿಯಾದ ಕ್ಯಾಂಪಸ್‌ನಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿಳಿಯಬೇಕಿತ್ತು
.ಒಂದೊಮ್ಮೆ ಬಂದಿದ್ದರೆ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ಗಾಗಿ ನಾಲ್ಕು ಯುಕಲಿಪ್ಟಸ್ ಮರಗಳನ್ನು ಕಡಿಯಬೇಕಾಗುತ್ತಿತ್ತು ಎನ್ನಲಾಗಿದೆ.
 
ಈ ಕುರಿತು 'ಡೆಕ್ಕನ್ ಹೆರಾಲ್ಡ್‌ 'ವರದಿ ಮಾಡಿದೆ, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವ ವಾರಗಳ ಮೊದಲು 2021ರ ನವೆಂಬರ್‌ನಲ್ಲಿ ನಾಲ್ಕು ಮರಗಳನ್ನು ಕಡಿಯಲು ಆದೇಶ ದೊರೆತಿತ್ತು.
 
ಅವರು ಡಿಸೆಂಬರ್ 6 ರಂದು ಡಾ. ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ಹೊಸ ಕಟ್ಟಡಕ್ಕೆ ಬರುವವರಿದ್ದರು.
 
ಆ ಜಾಗದಲ್ಲಿದ್ದ ಯುಕಲಿಪ್ಟಸ್ ಮರಗಳನ್ನು ಕಡಿಯದಿದ್ದರೆ ಹೆಲಿಕಾಪ್ಟರ್ ಲ್ಯಾಂಡಿಂಗ್ ಕಷ್ಟವಾಗುತ್ತದೆ ಎಂದು ಹೇಳಲಾಗಿತ್ತು. ಮರ ಕಡಿದ ನಂತರ ದಿಣ್ಣೆಗಳನ್ನು ಕಗ್ಗಲಿಪುರ ಪ್ರಾದೇಶಿಕ ಅರಣ್ಯ ಕಚೇರಿಗೆ ಸ್ಥಳಾಂತರಿಸಬೇಕಿತ್ತು.
 
ಮೋದಿ ಭೇಟಿ ಹಿನ್ನೆಲೆ, ಜ್ಞಾನಭಾರತಿ ಸುತ್ತಮುತ್ತ ಹಾಳಾಗಿದ್ದ ರಸ್ತೆಯನ್ನು ಸರಿ ಮಾಡಲು ಬಿಬಿಎಂಪಿಯು 1.5 ಕೋಟಿ ಕಾಮಗಾರಿಯನ್ನು ನಡೆಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments