Webdunia - Bharat's app for daily news and videos

Install App

75 ದಿನಗಳಲ್ಲಿ 200ಕ್ಕೂ ಹೆಚ್ಚು ಕಾರ್ಯಕ್ರಮಗಳೊಂದಿಗೆ ಚುನಾವಣಾ ಪ್ರಚಾರಕ್ಕೆ ಅಂತ್ಯ ಹಾಡಿದ ಮೋದಿ

sampriya
ಗುರುವಾರ, 30 ಮೇ 2024 (18:15 IST)
Photo By X
ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಮೂಲಕ ಲೋಕಸಭೆ ಚುನಾವಣೆ 2024ರ ಕೊನೆಯ ಪ್ರಚಾರಕ್ಕೆ ಈ ಮೂಲಕ ಅಂತ್ಯ ಹಾಡಿದರು.

ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆಯಲ್ಲಿರುವ ಭಾರತೀಯ ಜನತಾ ಪಕ್ಷವು ಮೂರನೇ ಬಾರಿ ಸತತ ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನೂ ಬಹುಮತದೊಂದಿಗೆ ಜಯ ಸಾಧಿಸಬೇಕೆಂಬ ಗುರಿಯಿಂದ ಪ್ರಧಾನಿ ಮೋದಿ ಅವರು ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ದೇಶದ ಉದ್ದಗಲಕ್ಕೂ ಪ್ರಯಾಣ ಬೆಳೆಸಿ ಬಿರುಸಿನ ಪ್ರಚಾರದಲ್ಲಿ ತೊಡಗಿದರು

ಇದೀಗ ಪ್ರಚಾರ ಮುಗಿಸಿ ಧ್ಯಾನದ ಕಡೆ ಮುಖ ಮಾಡಿರುವ ಮೋದಿ ಅವರು ಇಂದು ಸಂಜೆಯಿಂದ  ಜೂನ್‌ 1ರ ವರೆಗೆ ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರು ಮಾರ್ಚ್ 16 ರಂದು ಕನ್ಯಾಕುಮಾರಿಯಲ್ಲಿ ಲೋಕಸಭೆ ಚುನಾವಣೆಗೆ ಪ್ರಚಾರವನ್ನು ಆರಂಭಿಸಿದರು. 75 ದಿನಗಳಲ್ಲಿ 200 ಕ್ಕೂ ಹೆಚ್ಚು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ಪ್ರಧಾನಿ ನಡೆಸಿದರು, ಇದರಲ್ಲಿ ಅವರ ರ್ಯಾಲಿಗಳು ಮತ್ತು ರೋಡ್‌ಶೋಗಳು ಸೇರಿವೆ.

ಏಳು ಹಂತದ ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ ವಿವಿಧ ಕ್ಷೇತ್ರಗಳಲ್ಲಿ ರ್ಯಾಲಿ ನಡೆಸಿದರು. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಅವರು ಹೆಚ್ಚಿನ ರೋಡ್‌ಶೋಗಳು ಮತ್ತು ರ್ಯಾಲಿಗಳನ್ನು ನಡೆಸಿದ ಕೆಲವು ಪ್ರಮುಖ ರಾಜ್ಯಗಳು.

ಅದಲ್ಲದೆ ಮಾಧ್ಯಮ ಸಂಸ್ಥೆಗಳ ಸಂದರ್ಶನದಲ್ಲೂ ಮೋದಿ ಅವರು ಭಾಗವಹಿಸಿದರು.

ಇನ್ನೂ ಪ್ರಚಾರದ ವೇಳೆ ಧರ್ಮದ ಆಧಾರದ ಮೇಲೆ ಮೀಸಲಾತಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಅಯೋಧ್ಯೆಯಲ್ಲಿ ರಾಮ ಮಂದಿರ, ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದು ಮತ್ತು ಇತರ ವಿಷಯಗಳ ಬಗ್ಗೆ ಅವರು ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments