ಮೋದಿ ದೇಶದ ಜನರನ್ನು ಎರಡು ಬಾರಿ ಮೂರ್ಖರನ್ನಾಗಿಸಿದ್ದಾರೆ: ಕಾಂಗ್ರೆಸ್

Webdunia
ಮಂಗಳವಾರ, 27 ಡಿಸೆಂಬರ್ 2016 (17:39 IST)
ಕಪ್ಪು ಹಣ ಹೊರ ತರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಎರಡು ಬಾರಿ ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಟೀಕಿಸಿದ್ದಾರೆ. 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಯ ಪ್ರಚಾರದ ಸಮಯದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ವಾಪಸ್ ತಂದು ಜನತೆಗೆ ಹಂಚುತ್ತೇನೆ ಎಂದು ಹೇಳಿ ಮೂರ್ಖರನ್ನಾಗಿಸಿದ್ದರು. ಇದೀಗ, ಗರಿಷ್ಟ ಮುಖಬೆಲೆಯ ನೋಟ್ ಬ್ಯಾನ್ ಮಾಡುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಯಾಗುತ್ತದೆಂದು ದೇಶದ ಜನತೆಯನ್ನು ಮತ್ತೊಮ್ಮೆ ಮೂರ್ಖರನ್ನಾಗಿಸಿದ್ದಾರೆಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  
 
ತೆರಿಗೆ ಬದಲಾವಣೆ ಮಾಡುವ ಮೂಲಕ ಕಪ್ಪು ಹಣವನ್ನು ತಡೆಯಬಹುದು. ಆದರೆ, ಅದನ್ನು ಬಿಟ್ಟು ನೋಟು ನಿಷೇಧದ ನಿರ್ಧಾರ ಕೈಗೊಂಡಿದ್ದು ತಪ್ಪು. ಇದರಿಂದ ದೇಶದ ಆರ್ಥಿಕತೆ ಹದಗೆಡುವಂತಾಗಿದೆ ಎಂದು ಕಿಡಿಕಾರಿದರು.
 
ಕಪ್ಪು ಹಣ ಇರುವುದು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಬಳಿಯೇ ಹೊರತು ಜನಸಾಮಾನ್ಯರ ಬಳಿಯಿಲ್ಲ. ಆದರೆ ನೋಟ್ ಬ್ಯಾನ್ ಎಫೆಕ್ಟ್‌ನಿಂದ ಜನಸಾಮಾನ್ಯರೇ ಅತೀ ಸಂಕಷ್ಟಕ್ಕೆ ಸಿಗುಕಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments