ಪುತ್ರ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಕಾರಣವಾಗಿದ್ದಾನೆ ಎಂದು ಡಿಕೆಶಿ ತಾಯಿ ಗೌರಮ್ಮ ಗುಡುಗಿದ್ದಾರೆ.
ಇಂತಹ ದಾಳಿಗಳಿಗೆ ನಾವು ಹೆದರುವುದಿಲ್ಲ. ಇಂತಹ ದಾಳಿಗಳನ್ನು ನನ್ನ ಮಕ್ಕಳು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಪುತ್ರರು ರಾಜಕೀಯವಾಗಿ ಬೆಳೆಯುವುದನ್ನು ತಡೆಯಲು ದಾಳಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಮಕ್ಕಳು ತಪ್ಪು ಮಾಡಿಲ್ಲ, ಅಂತಹ ಮಕ್ಕಳನ್ನು ಹೆತ್ತಿದ್ದೇನೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಎದುರು ಹಾಕಿಕೊಂಡಿದ್ದಕ್ಕೆ ಪುತ್ರನ ನಿವಾಸದ ಮೇಲೆ ದಾಳಿಯಾಗಿದೆ ಎಂದು ತಿಳಿಸಿದ್ದಾರೆ.
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಬೆಂಬಲ ನೀಡಿರುವುದಕ್ಕೆ ದಾಳಿಯಾಗಿದೆ, ನನ್ನ ಮಕ್ಕಳ ಮೇಲಿನ ಐಟಿ ದಾಳಿಗೆ ಪ್ರಧಾನಿ ಮೋದಿಯೇ ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ನಿನ್ನೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 2.30 ಗಂಟೆಯವರೆಗೆ ದಾಳಿ ನಡೆಸಿದ್ದಾರೆ. ಆದರೆ ಯಾವುದೇ ದಾಖಲೆಗಳು ಅವರಿಗೆ ದೊರೆತಿಲ್ಲ. ಪುತ್ರ ಶಿವಕುಮಾರ್ ಅವರೊಂದಿಗೆ ಇಲ್ಲಿಯವರೆಗೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ಅವರ ತಾಯಿ ಗೌರಮ್ಮ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.