Webdunia - Bharat's app for daily news and videos

Install App

NGO ಕೆಲಸ ಹಾಡಿ ಹೊಗಳಿದ ಮೋದಿ

Webdunia
ಸೋಮವಾರ, 26 ಸೆಪ್ಟಂಬರ್ 2022 (20:20 IST)
ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಬೆಂಗಳೂರಿನ NGO ತಂಡವೊಂದರ ಸಮಾಜಮುಖಿ ಕಾರ್ಯವನ್ನು ಪ್ರಧಾನಿ ಮೋದಿ ಅವರು ಮನ್ ಕೀ ಬಾತ್‌ನಲ್ಲಿ ಪ್ರಶಂಸಿದ್ದಾರೆ. ಬೆಂಗಳೂರಿನ NGO ಯೂತ್ ಫಾರ್ ಪರಿವರ್ತನ್ ನಗರದ ಬಹುತೇಕ ಕಡೆ ಸ್ವಚ್ಛತೆ ಮಾಡುವುದರ ಜೊತೆಗೆ ಅರಿವು ಮೂಡಿಸುತ್ತಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸ್ಥಳೀಯರು ಅಷ್ಟೇ ಅಲ್ಲ ಪ್ರಧಾನಿ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1ನಿಮಿಷಕ್ಕೂ ಹೆಚ್ಚು ಸಮಯ ಈ NGO ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವಕರೇ ಸೇರಿ ಹಲವೆಡೆ ಸ್ವಯಂಪ್ರೇರಿತವಾಗಿ ಸ್ವಚ್ಛತೆ ಮಾಡುವ ಮೂಲಕ ನಗರವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಜನರಿಗೆ ಅರಿವು ಮೂಡಿಸುತ್ತಿದ್ದಾರೆ. ಈ ಸ್ವಯಂ ಸೇವಾ ಸಂಘ 800ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಈಗಾಗಲೇ ಯೂತ್ ಫಾರ್ ಪರಿವರ್ತನ್ ನಗರದ 370ಕ್ಕೂ ಹೆಚ್ಚು ಸ್ಥಳಗಳಲ್ಲಿ ಗೋಡೆಗಳನ್ನು ಸ್ವಚ್ಛಗೊಳಿಸಿ, ಚಿತ್ರಗಳಿಂದ ಆಕರ್ಷಕವಾಗಿ ಅಲಂಕರಿಸಿದೆ. ಪ್ರತಿ ಭಾನುವಾರ ಈ ತಂಡ ಮುಂಚಿತವಾಗಿ ಗುರುತಿಸಿ ಜಾಗವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಾರೆ. ಅಷ್ಟೇ ಅಲ್ಲದೇ ಸಾಕಷ್ಟು ಸರ್ಕಾರಿ ಶಾಲಾ ಮಕ್ಕಳಿಗೆ ಇತ್ತೀಚಿನ ಟೆಕ್ನಾಲಜಿ ಸೇರಿದಂತೆ ಉತ್ತಮ ಜೀವನ ಶೈಲಿಯ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನ ಸಹ ಮಾಡುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments