Webdunia - Bharat's app for daily news and videos

Install App

ಬೊಮ್ಮಾಯಿ ಉತ್ತಮ ಅಡಳಿತ ಮೋದಿ ಮೆಚ್ಚುಗೆ

Webdunia
ಗುರುವಾರ, 11 ನವೆಂಬರ್ 2021 (18:57 IST)
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿಯವರು ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದರು. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯೊಂದಿಗೆ ಸಂಯೋಜನೆ ಮಾಡುವಂತೆ ತಿಳೀಸಿದರು. ಇದರೊಂದಿಗೆ ಕೌಶಲ್ಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಬಲೀಕರಣ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿಯವರು ತಿಳಿಸಿದರು.ನಿಷ್ಠೆಯಿಂದ ದಿಟ್ಟತನದಿಂದ ಜನಪರ ಕೆಲಸ ಮಾಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆಯ ಫಲಿತಾಂಶಗಳ ಕುರಿತು ಮಾಹಿತಿ ನೀಡಿದಾಗ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪರ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments