ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಆಶ್ವಾಸನೆ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆರ್ಥಿಕ ನೆರವು ನೀಡಲಿ. ಕೇವಲ ಭಾಷಣ ಮಾಡಿ, ಆಶ್ವಾಸನೆ ನೀಡಿದರೆ ಸಾಲದು. ಬರದಿಂದ ತತ್ತರಿಸಿರುವ ಕರ್ನಾಟಕ ರಾಜ್ಯಕ್ಕೆ 12000 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯಸಭೆಗೆ ನಡೆಯುವ ಚುನಾವಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೂರನೇಯ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಅವರ ಹೆಸರು ಅಂತಿಮಗೊಂಡಿದೆ. ಮೂರನೇಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಣತಂತ್ರ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.