ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

Sampriya
ಶುಕ್ರವಾರ, 27 ಫೆಬ್ರವರಿ 2026 (20:15 IST)
ಬೆಂಗಳೂರು: ನಾವು ಜೆಡಿಎಸ್‌ ಎನ್‌ಡಿಎಗೆ ಕೊಡುವ ಶಕ್ತಿಯನ್ನು ಗುರುತಿಸಿ, ಬಳಸಿಕೊಳ್ಳುವ ಜಾಣ್ಮೆ, ಪ್ರಬುದ್ಧತೆ ಮೋದಿ, ಶಾ ಅವರಿಗಿದೆ. ಎನ್‌ಡಿಎ ಮತ್ತಷ್ಟು ಗಟ್ಟಿಗೊಳಿಸುವ ವಿಶ್ವಾಸವೂ ಇದೆ ಎಂದು ಜೆಡಿಎಸ್ ಹಿರಿಯ ನಾಯಕ ದೇವೇಗೌಡ ಹೇಳಿದರು. 

ಜೆಡಿಎಸ್‌ ಬೆಳ್ಳಿಹಬ್ಬದ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜನತಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

93 ವರ್ಷ ವಯಸ್ಸಾಗಿರುವ ನನಗೆ ಮಂತ್ರಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವ ಇಚ್ಛೆ ಇಲ್ಲ. ಈ ಶರೀರದಿಂದ ಆತ್ಮ ಹೊರ ಹೋಗುವ ಮುನ್ನಾ ರಾಜ್ಯದಲ್ಲಿ ಯೋಗ್ಯ ಆಡಳಿತ ಕೊಡುವ ಸರ್ಕಾರ ಬರಲಿದೆ. ಅದನ್ನು ಮೋದಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಮೈಸೂರು, ಕಿತ್ತೂರು, ಕಲ್ಯಾಣ ಕರ್ನಾಟಕ ಎಂದು ರಾಜ್ಯವನ್ನು ಮೂರು ಭಾಗವಾಗಿ ವಿಂಗಡಿಸುವ ಅಗತ್ಯ ಇಲ್ಲ, ನಾವೆಲ್ಲ ಒಂದೇ ತಾಯಿ ಮಕ್ಕಳು.ಒಟ್ಟಾಗಿ ಇರೋಣ, ಸಮೃದ್ಧ ಕರ್ನಾಟಕ ಕಟ್ಟೋಣ ಎಂದು ಕರೆಕೊಟ್ಟರು. 

ನನ್ನ ರಾಜಕೀಯ ಬದುಕಿನಲ್ಲಿ ಇಂತಹ ಕೆಟ್ಟ ಆಡಳಿತ ನೀಡಿದ ರಾಜ್ಯ ಸರ್ಕಾರವನ್ನು ನೋಡಿಲ್ಲ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯದ ನಗೆ ಬೀರಿದ ದೇವೇಗೌಡರು, ‘ದುಡಿಯುವ ಕೈಗೆ ಉದ್ಯೋಗ ನೀಡುವ ಕಾರ್ಯ ಮಾಡಬೇಕು’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ದಿ ಕೇರಳ ಸಿನಿಮಾಗೆ ತಡೆ, ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಸ್ಫೋಟಕ ಹೇಳಿಕೆ

ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಮುಹೂರ್ತ ಫಿಕ್ಸ್‌

ಕುಮಾರಸ್ವಾಮಿಯೇ ಮುಂದಿನ ಸಿಎಂ ಎಂದ ನಿಖಿಲ್ ಕುಮಾರಸ್ವಾಮಿಗೆ ಆರ್ ಅಶೋಕ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments