Select Your Language

Notifications

webdunia
webdunia
webdunia
webdunia

ಮೋದಿ ಆರೋಪ ಆಧಾರ ರಹಿತ, ನಾನಾಗಿದ್ದರೆ ನೀರವ್ ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ– ಸಿದ್ದರಾಮಯ್ಯ

ಮೋದಿ ಆರೋಪ ಆಧಾರ ರಹಿತ, ನಾನಾಗಿದ್ದರೆ ನೀರವ್ ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ– ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 20 ಫೆಬ್ರವರಿ 2018 (12:51 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಗಳೆಲ್ಲ ಆಧಾರ ರಹಿತವಾಗಿದ್ದು, ನಾನಾಗಿದ್ದರೆ ನೀರವ್ ಮೋದಿಯನ್ನು ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿಗೆ ಟಾಂಗ್‌ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಲೂಟಿ ಮಾಡಿ ಜೈಲಿಗೆ ಹೋದವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ. ಇವರ ಸರ್ಕಾರ ಇರುವಾಗಲೇ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ನೀರವ್ ಮೋದಿ 11,000 ಕೋಟಿ ಹಾಕಿಕೊಂಡು ಹೋಗಿದ್ದಾನೆ. ನಾನಾಗಿದ್ದರೆ ಬಿಡುತ್ತಿರಲಿಲ್ಲ ಎಂದಿದ್ದಾರೆ.

ನರೇಂದ್ರಮೋದಿ ಅವರ ಕುಮ್ಮಕ್ಕಿನಿಂದಲೇ ಓಡಿ ಹೋಗಿದ್ದಾರೆ. ಇವರು ಪ್ರಧಾನ ಮಂತ್ರಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದ ಸಮಸ್ಯೆಗಳು ಮೋದಿ ಅವರಿಗೆ ಕಾಣಿಸುತ್ತಿಲ್ಲ. ಸಾಲ ಮನ್ನಾ, ರೈತರ ಸಮಸ್ಯೆ, ವಿವಿಧ ಸಮಸ್ಯೆಗಳ ಬಗ್ಗೆ ಮಾತನಾಡದೇ ಕೇವಲ ಕಮೀಷನ್ ವಿಚಾರ ಮಾತ್ರ ಪ್ರಸ್ತಾಪ ಮಾಡಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿದ ಜಿ.ಟಿ.ದೇವೇಗೌಡ