Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಮತ್ತೊಮ್ಮೆ ಮೋದಿ ಆಗಮನ

ರಾಜ್ಯಕ್ಕೆ ಮತ್ತೊಮ್ಮೆ ಮೋದಿ ಆಗಮನ
ಬೆಂಗಳೂರು , ಶನಿವಾರ, 13 ಆಗಸ್ಟ್ 2022 (12:05 IST)
ಬೆಂಗಳೂರು : ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು.
 
ಬಳಿಕ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಸರ್ಕಾರ ಜನೋತ್ಸವವನ್ನು ಮತ್ತೆ ನಡೆಸಲು ತೀರ್ಮಾನಿಸಿದೆ.

ಜುಲೈ 28ರ ಜನೋತ್ಸವ ಸಮಾವೇಶ ದಕ್ಷಿಣ ಕನ್ನಡದಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕೊನೆ ಗಳಿಗೆಯಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಸಿದ್ದರಾಮೋತ್ಸವ ಬಳಿಕ ಕಳೆದುಕೊಂಡಿದ್ದ ರಾಜಕೀಯ ಚಾರ್ಮ್ ಪಡೆದುಕೊಳ್ಳಲು, ಪಕ್ಷ, ಸರ್ಕಾರದಲ್ಲಿ ಉತ್ಸಾಹ ತರಲು ದೊಡ್ಡಬಳ್ಳಾಪುರ ಜನೋತ್ಸವ ನಡೆಸಲು ನಿರ್ಧರಿಸಲಾಗಿದೆ. ಇದೇ ತಿಂಗಳ 28 ರಂದು ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ