Select Your Language

Notifications

webdunia
webdunia
webdunia
webdunia

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ
ಬೆಂಗಳೂರು , ಭಾನುವಾರ, 4 ಫೆಬ್ರವರಿ 2018 (22:04 IST)

ಮಹಾದಾಯಿ ಸಮಸ್ಯೆಯ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಸ್ತಾಪ ಮಾಡದೇ ಉತ್ತರ ಕರ್ನಾಟಕದ ಜನರಿಗೆ ನಿರಾಸೆ ಮೂಡಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ದೀರ್ಘವಾಗಿ ಭಾಷಣ ಮಾಡಿದರು. ಆದರೆ, ಮಹಾದಾಯಿ ವಿಚಾರವನ್ನು ಪ್ರಸ್ತಾಪ ಮಾಡಲೇ ಇಲ್ಲ.

ಮಹಾದಾಯಿ ನೀರಿಗಾಗಿ ಹೋರಾಟಗಾರರು ಹಂತ ಹಂತವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದೂ ಕೂಡ ಮಹಾದಾಯಿ ನೀರಿಗಾಗಿ ಪ್ರತಿಭಟನೆ ನಡೆದಿತ್ತು. ನರೇಂದ್ರ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿ ಏನಾದರೂ ಪರಿಷ್ಕಾರ ಸೂಚಿಸಲಿದ್ದಾರೆ ಎನ್ನುವ ಹೋರಾಟಗಾರರ ನಿರೀಕ್ಷೆಯೂ ಹುಸಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ನರೇಂದ್ರಮೋದಿ ಕರೆ