Select Your Language

Notifications

webdunia
webdunia
webdunia
webdunia

ಜನರಲ್ಲಿ ಮೋದಿ ಭ್ರಮೆ ಹುಟ್ಟಿಸ್ತಿದ್ದಾರಂತೆ…

ಜನರಲ್ಲಿ ಮೋದಿ ಭ್ರಮೆ ಹುಟ್ಟಿಸ್ತಿದ್ದಾರಂತೆ…
ಮಂಗಳೂರು , ಶುಕ್ರವಾರ, 5 ಏಪ್ರಿಲ್ 2019 (16:27 IST)
5 ವರ್ಷ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ನರೇಂದ್ರ ಮೋದಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿದ್ದಾರೆ. ಹೀಗಂತ ಕೈ ಪಾಳೆಯದ ಮುಖಂಡ ಆರೋಪಿಸಿದ್ದಾರೆ.

ಮಂಗಳೂರುನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆರ್. ವಿ. ಸುದರ್ಶನ್ ಹೇಳಿಕೆ ನೀಡಿದ್ದಾರೆ. ಕೇಂದ್ರದ್ದು ಇದು ಜನ ವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ದೇಶದ ಚುನಾವಣೆ ವ್ಯವಸ್ಥೆಯಲ್ಲೂ  ಯಾವುದೇ ಸುಧಾರಣೆ ಮಾಡಿಲ್ಲ. ದೇಶದ ರಕ್ಷಣಾ ವ್ಯವಸ್ಥೆಗೆ ಅತೀ ಕಡಿಮೆ ಅನುದಾನ ಇಡಲಾಗಿದೆ. ಯು ಪಿ ಎ ಸರಕಾರ ಹೆಚ್ಚಿನ ಅನುದಾನ ನೀಡಿತ್ತು ಎಂದರು.

ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆ ತರುತ್ತಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕೂಡಾ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ದೂರಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ರಾಹುಲ್ ಗಾಂಧಿಗೆ ಬಿಗ್ ಶಾಕ್!