Webdunia - Bharat's app for daily news and videos

Install App

ಸೂರ್ಯರ ಬಳಿ ಬಂದು ಮೋದಿ ಪರ ಘೋಷಣೆ

Webdunia
ಮಂಗಳವಾರ, 9 ಏಪ್ರಿಲ್ 2019 (18:01 IST)
ರಾಜಧಾನಿಯ ಬಸವನಗುಡಿಯ ಪಾರ್ಕ್ ಗಳಲ್ಲಿ ಸೂರ್ಯನ ತೇಜಸ್ಸು ದಿನೇ ದಿನೇ ಇಮ್ಮಡಿಸುತ್ತಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು  ಕಂಡಾಕ್ಷಣ ಪಾರ್ಕ್ ಗಳಲ್ಲಿ ವಾಕಿಂಗ್, ಜಾಗಿಂಗ್ ಮಾಡುತ್ತಿದ್ದ ನಾಗರೀಕರು ಮೋದಿ, ಮೋದಿ ಎಂದು ಜಯಕಾರ ಹಾಕುತ್ತಾ ತೇಜಸ್ವಿ ಸೂರ್ಯರವರ ಬಳಿ ಬಂದು ಬೆಂಬಲ ಸೂಚಿಸುತ್ತಿದ್ದಾರೆ. ಅಭ್ಯರ್ಥಿ ಹಿಂದೆಯೇ ಹೆಜ್ಜೆ ಹಾಕಿದರೆ,  ಇನ್ನು ಕೆಲವರು ಬಿಜೆಪಿ ಕರಪತ್ರಗಳನ್ನು ಪಡೆದು ತಾವು ಹಂಚಲು ಮುಂದಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಅಷ್ಟರ ಮಟ್ಟಿಗೆ ಇಲ್ಲಿ ಬಿಜೆಪಿಯ ಪರ ಅಲೆ ಎದ್ದಿದೆ.

ತನ್ನ ಪಾಲಿಗೆ ಭದ್ರಕೋಟೆ ಎನಿಸಿಕೊಂಡಿರುವ ಬಸವನಗುಡಿಯಲ್ಲಿ ಬಿಜೆಪಿ ಮತ ಭರಾಟೆಯನ್ನು ಮುಂದುವರೆಸಿ ಮತದಾರನನ್ನು ಗೆಲ್ಲಲು ಬಿಜೆಪಿ ಯಶಸ್ವಿಯಾಗಿದೆ.

ಈಗಾಗಲೇ,  ಈ ಕ್ಷೇತ್ರದಲ್ಲಿ ಎದ್ದಿರುವ ಮೋದಿ ಅಲೆಯ ನಡುವೆಯೇ ಬಸವನಗುಡಿ ಶಾಸಕ ರವಿಸುಬ್ರಮಣ್ಯ, ಹನುಮಂತನಗರ ಬಿಬಿಎಂಪಿ ಸದಸ್ಯ ಕೆಂಪೇಗೌಡ, ವಿದ್ಯಾಪೀಠದ ಬಿಬಿಎಂಪಿ ಸದಸ್ಯೆ ಶ್ಯಾಮಲ ಸಾಯಿಕುಮಾರ್ , ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಉದ್ಯಾನವನಗಳಿಗೆ ಭೇಟಿ ನೀಡಿ ತೇಜಸ್ವಿ ಸೂರ್ಯ ಮತದಾರರಲ್ಲಿ ಮತಯಾಚನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments