Webdunia - Bharat's app for daily news and videos

Install App

ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ : ಸಿದ್ದರಾಮಯ್ಯ ವಾಗ್ದಾಳಿ

Webdunia
ಸೋಮವಾರ, 5 ಸೆಪ್ಟಂಬರ್ 2022 (08:19 IST)
ಹಾಸನ : ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ.
 
ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ.

ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. ಅವರ ಹೇಳಿಕೆಯಂತೆ ಏನೂ ಕ್ರಮ ತೆಗೆದುಕೊಂಡಿಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ. ತಹಸೀಲ್ದಾರ್ ಕಚೇರಿ, ಪೊಲೀಸ್ ಠಾಣೆ, ಪಿಡಬ್ಲ್ಯೂಡಿ ಇಲಾಖೆ, ನೀರಾವರಿ ಇಲಾಖೆ ಯಾವ ಸರ್ಕಾರಿ ಕಚೇರಿಗಳಿಗೆ ಹೋದರೂ ಭ್ರಷ್ಟಾಚಾರವಿಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಂಧಿಸಿದಂತೆ `ಭ್ರಷ್ಟಾಚಾರ ನಡೆದಿದ್ದರೆ ಸಾಕ್ಷಿ ನೀಡಲಿ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments