Webdunia - Bharat's app for daily news and videos

Install App

ಸುಳ್ಳು ಹೇಳಿದ್ದಕ್ಕೆ ಮೋದಿಯವರು ನಮ್ಮ ಕ್ಷಮೆ ಕೇಳಬೇಕು: ಸಿದ್ದರಾಮಯ್ಯ

Sampriya
ಗುರುವಾರ, 7 ನವೆಂಬರ್ 2024 (16:45 IST)
Photo Courtesy X
ಬೆಂಗಳೂರು: 'ಸುಳ್ಳೇ ಬಿಜೆಪಿಯ ಮನೆ ದೇವರು' ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ 'ಗೃಹಲಕ್ಷ್ಮಿ' ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ.

ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು ₹30,285 ಕೋಟಿ ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ.

ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸುತ್ತೇನೆ.

ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments