Webdunia - Bharat's app for daily news and videos

Install App

ಮೋದಿ ಭಾಷಣ ಕೇವಲ ಚುನಾವಣಾ ಗಿಮಿಕ್: ಸಚಿವ ಯು.ಟಿ. ಖಾದರ್

Webdunia
ಮಂಗಳವಾರ, 3 ಜನವರಿ 2017 (14:22 IST)
ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕೇವಲ ಚುನಾವಣಾ ಗಿಮಿಕ್ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದರು.
 
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶಾದ್ಯಂತ ಏಕಾಏಕಿ 500. 1000 ಮುಖಬೆಲೆಯ ನೋಟು ನಿಷೇಧದ ಬಳಿಕ ಉಂಟಾದ ಸಮಸ್ಯೆಗಳು ಬಗೆಹರಿಯುವ ಲಕ್ಷಣಗಳೇ ಕಾಣುತ್ತಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು. 
 
ಐವತ್ತು ದಿನಗಳಲ್ಲಿ ಸಮಸ್ಯೆ ಬಗೆಹರಿಯದ ಬಗ್ಗೆ ದೇಶದ ಜನತೆಯಲ್ಲಿ ಕ್ಷಮೆಯಾಚಿಸುವ ಸೌಜನ್ಯವನ್ನು ಸಹ ಪ್ರಧಾನಿ ನರೇಂದ್ರ ಮೋದಿ ತೋರಿಲ್ಲ. ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚೆ ನಡೆಸಬೇಕಿತ್ತು. ಆದರೆ, ಪ್ರಧಾನಿ ಅವರು ಕಾರ್ಪೋರೇಟ್ ಕಂಪನಿಗಳ ಮುಖಂಡರೊಂದಿಗೆ ಮಾತ್ರ ಚರ್ಚೆ ನಡೆಸಿ ನೋಟು ನಿಷೇಧವನ್ನು ಜಾರಿಗೊಳಿಸಿದ್ದಾರೆ. 
 
ನೋಟು ನಿಷೇಧದ ಬಳಿಕ ಎಟಿಎಂ ಕೇಂದ್ರಗಳಲ್ಲಿ ಹಣ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದಾಗ ಸತ್ತವರ ಬಗ್ಗೆ ಸ್ಮರಣೆ ಮಾಡಿಲ್ಲ. ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಕಾಂಗ್ರೆಸ್ ದೊಡ್ಡ ಮಟ್ಟದ ಹೋರಾಟ ನಡೆಸಲಿದೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments