ಅಯೋಧ್ಯೆ ದೀಪೋತ್ಸವದಲ್ಲಿ ಭಾಗಿಯಾಗಲಿರುವ ಮೋದಿ

Webdunia
ಭಾನುವಾರ, 23 ಅಕ್ಟೋಬರ್ 2022 (16:43 IST)
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ದೀಪೋತ್ಸವ ನಡೆಸಲಾಗ್ತಿದ್ದು, ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹಬ್ಬವನ್ನು ಆಚರಿಸಲಿದ್ದಾರೆ. ಅಯೋಧ್ಯೆಯ ದೀಪೋತ್ಸವ ಬಹಳ ವಿಶೇಷವಾದುದು. ಶ್ರೀರಾಮ ತನ್ನ 14 ವರ್ಷದ ವನವಾಸ ಮುಗಿಸಿ ವಾಪಾಸ್ ಬಂದ ನಂತರ ಜನರು ಇಡೀ ಅಯೋಧ್ಯೆಯನ್ನು ದೀಪಗಳಿಂದ ಅಲಂಕರಿಸಿ, ಸಂಭ್ರಮಿಸಿದ್ದರು ಎಂಬ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯ ದೀಪಾವಳಿ ಬಹಳ ಪ್ರಸಿದ್ಧಿ ಪಡೆದಿದೆ. ಅಯೋಧ್ಯೆಯ ಆಲಯದ ಘಾಟ್​ನಲ್ಲಿ ಇಂದು 15 ಲಕ್ಷ ಹಣತೆಗಳು ಬೆಳಗಲಿವೆ. ಈ ಬಾರಿ ಪ್ರಧಾನಿ ಮೋದಿ ಅಯೋಧ್ಯೆಯ ದೀಪೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀ ರಾಮಜನ್ಮ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ನಂತರ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರದ ಪ್ರವಾಸಿ ತಾಣವನ್ನು ವೀಕ್ಷಿಸುತ್ತಾರೆ. ಬಳಿಕ ಶ್ರೀರಾಮನ ರಾಜ್ಯಾಭಿಷೇಕ ವೀಕ್ಷಿಸಲು ಪ್ರಧಾನಮಂತ್ರಿ ಶ್ರೀರಾಮ ಕಥಾ ಪಾರ್ಕ್‌ನಲ್ಲಿ ಉಪಸ್ಥಿತರಿರಲಿದ್ದಾರೆ. ಬಳಿಕ, ಸಂಜೆ 6.30ಕ್ಕೆ ಸರಯೂ ಘಾಟ್‌ನಲ್ಲಿ ಆರತಿಯಲ್ಲಿ ಭಾಗವಹಿಸಲಿದ್ದಾರೆ. ನಂತರ ರಾಮ್ ಕಿ ಪೌಡಿ ಘಾಟ್‌ಗಳಲ್ಲಿ ‘ದೀಪೋತ್ಸವ’ದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments