Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

NEET UG Paper Leak
Photo Credit X
ಬೆಂಗಳೂರು: NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯದಲ್ಲಿ ಪ್ರಧನಿ ನರೇಂದ್ರ ಮೋದಿ ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಕ್ಕೆ ಕರ್ನಾಟಕ ಡಿಸಿಎಂ ಜಿ. ಪರಮೇಶ್ವರ್ ಟೀಕಿಸಿದ್ದಾರೆ. 

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂದು ಆಗ್ರಹಿಸಿದರು. 

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ಪ್ರಧಾನಿ ಮೋದಿ ಮಾಡಿದ ಟ್ವೀಟ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, "ತನಿಖೆ ನಡೆಸಲಾಗುವುದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ.

ತಾವು ವಿದ್ಯಾರ್ಥಿಗಳ ಪರವಾಗಿ ನಿಲ್ಲುವುದಾಗಿ ಅವರು ಹೇಳಿದ್ದಾರೆ. ಹಾಗಿದ್ದಲ್ಲಿ, ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು. ಜವಾಬ್ದಾರರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ