ವಿದ್ವತ್ ಹಲ್ಲೆ ಕೇಸ್: ಮೊಹಮ್ಮದ್ ನಲಪಾಡ್ ಗಿಲ್ಲ ಇಂದು ಬಿಡುಗಡೆ ಭಾಗ್ಯ

Webdunia
ಶುಕ್ರವಾರ, 23 ಫೆಬ್ರವರಿ 2018 (17:07 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರವಾಗಿ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
 

ವಿದ್ವತ್ ಪರ ವಕೀಲರು ಮಧ್ಯಂತರ ಜಾಮೀನು ನೀಡುವುದಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ, ವಿದ್ವತ್ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದಾರೆ. ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಫೆಬ್ರವರಿ 26 ರವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆ ಜಾಮೀನು ಅರ್ಜಿ ವಿಚಾರಣೆಗೆ ಬಂದರೂ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು 26 ರವರೆಗೆ ಅವಕಾಶ ಕೊಟ್ಟಿರುವುದರಿಂದ ಅಲ್ಲಿಯವರೆಗೆ ನಲಪಾಡ್ ಗ್ಯಾಂಗ್ ಗೆ ಬಿಡುಗಡೆಯ ಭಾಗ್ಯ ಇರಲಾರದು. ಆರೋಪಿ ಪರ ವಕೀಲ ಟಾಮಿ ಸೆಬಾಸ್ಟಿಯನ್ ಮತ್ತು ವಿದ್ವತ್ ಪರ ವಕೀಲರ ವಾದ ವಿವಾದ ಆಲಿಸಿದ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲು ನಿರ್ಧರಿಸಿದೆ.

ಈ ನಡುವೆ ಆಲಂ ಪಾಷಾ ಎಂಬವರು ವಿದ್ವತ್ ಪರ ವಾದ ಮಂಡಿಸಲು ತಮಗೂ ಆದೇಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ಮೂರನೇ ವ್ಯಕ್ತಿಗೆ ಪ್ರಕರಣದಲ್ಲಿ ವಾದ ಮಂಡಿಸಲು ಅವಕಾಶ ನೀಡಬಾರದು ಎಂದು ಆರೋಪಿ ಪರ ವಕೀಲರು ವಾದಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ರಸ್ತೆ ಅಪಘಾತ: ರಸ್ತೆಯಲ್ಲೇ ಉಸಿರು ಚೆಲ್ಲಿದ ಮೂವರು ಮೀಸಲು ಸಬ್‌ ಇನ್ಸ್‌ಪೆಕ್ಟರ್‌ಗಳು

ಚುನಾವಣೆ ಹೊಸ್ತಿಲಲ್ಲಿ ಶಬರಿಮಲೆ ವಿಚಾರದಲ್ಲಿ ಯೂಟರ್ನ್ ಹೊಡೆದ ಪಿಣರಾಯಿ ವಿಜಯನ್‌ ಸರ್ಕಾರ

ಮತ್ತಷ್ಟು ಎಲ್‌ಪಿಜಿ ಹೊತ್ತ ಭಾರತದ ಎರಡು ಹಡಗುಗಳಿಗೆ ಹೊರ್ಮುಜ್‌ ಜಲಸಂಧಿಯಲ್ಲಿ ಗ್ರೀನ್‌ಸಿಗ್ನಲ್‌

ಖಮೇನಿಗೆ ಉತ್ತಮ ಬಾಂಧವ್ಯವಿದ್ದ ಭಾರತದೊಂದಿಗೆ ಯಾವುದೇ ಸಂಘರ್ಷವಿಲ್ಲ: ಇರಾನ್ ಸರ್ವೋಚ್ಛ ನಾಯಕನ ರಾಯಭಾರಿ

ಮಗುವನ್ನು ಕೈಯಲ್ಲಿ ಹಿಡಿದುಕೊಂಡಿರುವಾಗಲೇ ಲಿಫ್ಟ್‌ನಲ್ಲಿ ಹೀಗಾಗುವುದಾ, ಮೈ ಜುಮ್ಮೆನಿಸುತ್ತದೆ ಈ Video

ಮುಂದಿನ ಸುದ್ದಿ
Show comments