Publish Date: Mon, 12 Mar 2018 (10:36 IST)
Updated Date: Mon, 12 Mar 2018 (10:38 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನ ಶಿಕ್ಷೆ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ನಲಪಾಡ್ ಮತ್ತು ಸಹಚರರು ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಶುಕ್ರವಾರ ಇವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿರಲಿಲ್ಲ.
ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ನಲಪಾಡ್ ಅಗ್ನಿ ಪರೀಕ್ಷೆ ಎದುರಿಸುವಂತಾಗಿದೆ. ತಾನು ಪ್ರಭಾವಿ ಮಗ ಎಂಬ ಹಮ್ಮಿನಲ್ಲಿ ಹಲ್ಲೆ ನಡೆಸಿದ್ದ ನಲಪಾಡ್ ಇಂದು ಹೊರಬರಲು ಹರಸಾಹಸ ಪಡುವಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ