Webdunia - Bharat's app for daily news and videos

Install App

ಕಾಂಗ್ರೆಸ್ ಬೆಂಬಲಿಗರಿಂದ ಮತದಾರರಿಗೆ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ಆರೋಪ

Webdunia
ಶನಿವಾರ, 13 ಫೆಬ್ರವರಿ 2016 (11:41 IST)
ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಹಣ ಹಂಚುತ್ತಿದ್ದಾರೆ. ಇದನ್ನು ತಡೆಗಟ್ಟದಿದ್ದರೆ ನಾನು ಕೂಡ ಬೀದಿಗಿಳಿದು ಗಲಭೆಗೂ ಸಿದ್ಧವಿರುವುದಾಗಿ ಬಿಜೆಪಿ ಅಭ್ಯರ್ಥಿ  ವೈ.ಎ. ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭೈರತಿ ಭಸವರಾಜ್ ಬೆಂಬಲಿಗ ಕಾಂಗ್ರೆಸ್ ನಾಯಕರು ಯಥೇಚ್ಛವಾಗಿ ಹಣ ಹಂಚಿಕೆ ಮಾಡಿದ್ದಾರೆ.

ಹೀಗೆ ಮುಂದುವರಿದರೆ ತಾವೇ ಮುಂದೆ ನಿಂತು ಬೆಂಬಲಿಗರೊಂದಿಗೆ ಧರಣಿ ಮಾಡುವುದಾಗಿ ಹೇಳಿಕೆ ನೀಡಿದರು. ಹಣ ಹಂಚುತ್ತಿದ್ದ ಕಾಂಗ್ರೆಸ್ ಬೆಂಬಲಿಗನೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಯಿತು. 

ಭೈರತಿ ಬಸವರಾಜ್ ಕಡೆಯವರು ಕಾರುಗಳಲ್ಲಿ ಬಂದು ಜನರಿಗೆ ನೇರವಾಗಿ ಹಣ ಹಂಚುತ್ತಿದ್ದಾರೆ. ಇಲ್ಲಿ ಸರ್ಕಾರ ಸಂಪೂರ್ಣವಾಗಿ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡಿದೆ. ಹೀಗೆ ಮುಂದುವರಿದರೆ ನೀವು ಬೇರು ಸಮೇತ ಹೊರಟುಹೋಗುತ್ತೀರಿ ಎಂದು ಎಚ್ಚರಿಸಿದರು.

ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ರೆಡ್ಡಿ ವಿರುದ್ಧ ಆರೋಪ ಮಾಡಿದ್ದೀರಿ. ಈಗ ನೀವೇನು ಮಾಡುತ್ತಿದ್ದೀರಿ, ರಿಪಬ್ಲಿಕ್ ಆಫ್ ಬೆಂಗಳೂರು ಮಾಡುತ್ತಿದ್ದೀರಾ.  ಹಣ ಹಂಚುತ್ತಿದ್ದರೂ ಪೊಲೀಸರು ಅಸಹಾಯಕರಾಗಿ ನೋಡುತ್ತಾ ನಿಂತಿದ್ದಾರೆ ಎಂದು ನಾರಾಯಣ ಸ್ವಾಮಿ ಆರೋಪಿಸಿದರು. ಹೀಗೆ ಮುಂದುವರಿದರೆ ಮುಂದಿನ ಅನಾಹುತಗಳಿಗೆ ರಾಜ್ಯಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments