Webdunia - Bharat's app for daily news and videos

Install App

ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ

Webdunia
ಸೋಮವಾರ, 11 ಅಕ್ಟೋಬರ್ 2021 (20:43 IST)
ನಗರದ ದೊಮ್ಮಲೂರು ವಾರ್ಡ್ ವ್ಯಾಪ್ತಿಯಲ್ಲಿ ಅಮರ ಜ್ಯೋತಿ ಲೇಔಟ್ ನ 5 ಮತ್ತು 6ನೇ ಮುಖ್ಯರಸ್ತೆಯಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಇರುವ ಮೋರಿಗಳಲ್ಲಿ ಹೂಳನ್ನು ತೆರವುಗೊಳಿಸಬೇಕು. ಜೊತೆಗೆ 6ನೇ ಮುಖ್ಯ ರಸ್ತೆಯಲ್ಲಿ ಕೂಡಲೆ ಕ್ರಾಸ್ ಕಲ್ವರ್ಟ್ ಅನ್ನು ನಿರ್ಮಿಸಲು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 
 
ಅಮರ ಜ್ಯೋತಿ ಲೇಔಟ್‌ನಲ್ಲಿ ಮಳೆಗಾಲದ ವೇಳೆ ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಮುಖ್ಯ ಆಯುಕ್ತರು ಹಾಗೂ ಮಾನ್ಯ ಸ್ಥಳೀಯ ಶಾಸಕರು ಶ್ರೀ ಎನ್.ಎ.ಹ್ಯಾರೀಸ್ ರವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 
ಈ ವೇಳೆ 5ನೇ ಮುಖ್ಯ ರಸ್ತೆಯ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಆವರಣದಲ್ಲಿ ಸಣ್ಣ ಮೋರಿ ಇದೆ. ಈ ಪೈಕಿ ಮಳೆ ನೀರು ಸರಾಗಿ ಹರಿದು ಹೋಗಲು ಹೊಸದಾಗಿ ಮೋರಿ ನಿರ್ಮಿಸಿದಾಗ ರಸ್ತೆಗಳ ಮೇಲೆ ನಿಲ್ಲುವ ನೀರು ಸರಾಗವಾಗಿ ಹರಿದು ಹೋಗಲಿದೆ. ಆದ್ದರಿಂದ ಬೃಹತ್ ನೀರುಗಾಲುವೆ ಅಧಿಕಾರಿಗಳು ಗಾಲ್ಫ್ ಕ್ಲಬ್ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಿ. ಗಾಲ್ಫ್ ಕ್ಲಬ್ ಆವರಣದಲ್ಲಿ ಗಾಲ್ಫ್ ಕ್ಲಬ್ ನವರೇ ಮೋರಿ ನಿರ್ಮಿಸಿ ಚಲ್ಲಘಟ್ಟ ಕಣಿವೆಗೆ ನೀರು ಹೋಗುವಂತೆ ಮಾಡಬೇಕು ಎಂದು ತಿಳಿಸಿದರು.
 
ಆಲ್ಬರ್ಟ್ ಸ್ಟ್ರೀಟ್ ಹಾಗೂ ರೀನಿಯಸ್ ಸ್ಟ್ರೀಟ್ ರಸ್ತೆ ತಪಾಸಣೆ:
 
ಶಾಂತಲಾನಗರ ವಾರ್ಡ್ ವ್ಯಾಪ್ತಿಯ ಆಲ್ಬರ್ಟ್ ಸ್ಟ್ರೀಟ್ ಹಾಗೂ ರೀನಿಯಸ್ ಸ್ಟ್ರೀಟ್ ರಸ್ತೆಯನ್ನು ಮುಖ್ಯ ಆಯುಕ್ತರು ಹಾಗೂ ಮಾನ್ಯ ಸ್ಥಳೀಯ ಶಾಸಕರು ಶ್ರೀ ಎನ್.ಎ.ಹ್ಯಾರೀಸ್ ರವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 
ಆಲ್ಬರ್ಟ್ ಸ್ಟ್ರೀಟ್ ರಸ್ತೆ ಬದಿಯ ಮೋರಿಗಳನ್ನು ಪುನರ್ ನವೀಕರಣ ಮಾಡಿ ನೀರು ಸರಾಗವಾಗಿ ಹರಿದುಹೊಗುವಂತೆ ಮಾಡಬೇಕು. ಈ ಸಂಬಂಧ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ರಿಚ್ಮಂಡ್ ರಸ್ತೆ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ಸಸಿಗಳನ್ನು ಕಾಲ-ಕಾಲಕ್ಕೆ ಕಟಾವು ಮಾಡಿ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು.
 
ಕೊನೆಯದಾಗಿ, ರೀನಿಯಸ್ ಸ್ಟ್ರೀಟ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಸ್ಥಳ ಪರಿಶೀಲನೆ ನಡೆಸಿ ರಸ್ತೆ ಬದಿಯಲ್ಲಿರುವ ಮೋರಿಗಳಲ್ಲಿ ಹೂಳನ್ನು ತೆರವು ಮಾಡಿ ನಿರು ಸರಾಗವಾಗಿ ಹರಿದುಹೋಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಪರಿಶೀಲನೆ ವೇಳೆ ಪೂರ್ವ ವಲಯ ಮುಖ್ಯ ಇಂಜಿನಿಯರ್ ಮೋಹನ್ ಕೃಷ್ಣ, ಬೃಹತ್ ನೀರುಗಾಲುವೆ ವಿಭಾಗದ ಮುಖ್ಯ ಇಂಜಿನಿಯರ್ ಸುಗುಣಾ, ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್ ಲೋಕೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು
bbmp

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments