Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

Monsoon rainfall, maximum temperature, and Meteorological Department in Karnataka.
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕ್ಷೀಣಿಸಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆ ವಾತಾವರಣ ಮುಂದುವರಿಯಲಿದೆ ಹಾಗೂ ಗರಿಷ್ಠ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಶುಷ್ಕ ವಾತಾವರಣ ಆವರಿಸಿದೆ. ಮಳೆ ಮೋಡಗಳ ಕೊರತೆಯಿಂದಾಗಿ ನೇರ ಸೂರ್ಯನ ಬೆಳಕು ಬೀಳುತ್ತಿದ್ದು, ಕರಾವಳಿ, ಹಳೆ ಮೈಸೂರು ಭಾಗ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3°C ನಷ್ಟು ತಾಪಮಾನ ಏರಿಕೆಯಾಗಿದೆ.

ಪ್ರಸಕ್ತ ಸೆಪ್ಟೆಂಬರ್ ತಿಂಗಳಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಇರುವುದು ಕೃಷಿ ಚಟುವಟಿಕೆಗಳ ಮೇಲೆಯೂ ಪ್ರಭಾವ ಬೀರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಕೆಲವೇ ಪ್ರದೇಶಗಳಲ್ಲಿ ಮಾತ್ರ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಹಗುರ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಈ ತಿಂಗಳು ಒಣ ಹವೆಯಿಂದ ತಾಪಮಾನದಲ್ಲಿಯೂ ಏರಿಕೆಯಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗಿದೆ. ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆಯಾಗಿದ್ದು, 33 ಡಿಗ್ರಿ ಸೆಲ್ಸಿಯಸ್‌ಗೆ ಗರಿಷ್ಠ ಉಷ್ಣಾಂಶ ತಲುಪಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೊಡಗು, ರಾಮನಗರ ಜಿಲ್ಲೆಯ ಒಂದೆರಡು ಕಡೆ ಸೋಮವಾರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ