Webdunia - Bharat's app for daily news and videos

Install App

ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ!

Webdunia
ಮಂಗಳವಾರ, 25 ಅಕ್ಟೋಬರ್ 2022 (16:56 IST)
ಡ್ರಿಪ್ಸ್​​​ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ. ಪ್ರಯಾಗರಾಜ್​​​​ನಲ್ಲಿ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ್ಬರ ದೇಹಕ್ಕೆ ಪ್ಲಾಸ್ಮಾ ನೀಡುವುದಕ್ಕೆ ಬದಲಾಗಿ ಮೂಸಂಬಿ ರಸ ನೀಡಲಾಗಿದ್ದು, ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ದೇಹಕ್ಕೆ ಮೂಸಂಬಿ ರಸ ಸೇರಿದ ಕಾರಣಕ್ಕೆ ರೋಗಿ ಪ್ರದೀಪ್‌ ಪಾಂಡೆ ಎಂಬ ರೋಗಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಉತ್ತರ ಪ್ರದೇಶದಲ್ಲಿ ನಕಲಿ ರಕ್ತನಿಧಿಗಳ ಅಕ್ರಮ ಬಯಲಾಗಿದೆ. ಪ್ಲಾಸ್ಮಾ ಪೊಟ್ಟಣದಲ್ಲಿ ಮೂಸಂಬಿ ರಸ ಇರುವುದನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments