Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ ಬಸ್ ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (18:57 IST)
ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಅ.30 ಮತ್ತು 31ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್‌, ಪಣಜಿ, ಪುಣೆ, ಮುಂಬೈ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಹಬ್ಬ ಮುಗಿದ ನಂತರ ಬೆಂಗಳೂರು ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನ.5 ಮತ್ತು 7 ರಂದು ಸಹ ಬೇಡಿಕೆಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್‌ಗಳನ್ನು ಕೆ.ಎಸ್‌.ಆರ್‌.ಟಿ.ಸಿ ಮೊಬೈಲ್‌ ಆಯಪ್‌ ಹಾಗೂ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಮಾಡಬಹುದಾಗಿದೆ. ಕೋವಿಡ್‌ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments