Webdunia - Bharat's app for daily news and videos

Install App

ಗಣೇಶ ವಿಸರ್ಜನೆಗೆ ತೆರಳಿದ್ದ 12 ಕ್ಕೂ ಹೆಚ್ಚು ಜನರು ನದಿ ಪಾಲು

Webdunia
ಬುಧವಾರ, 7 ಸೆಪ್ಟಂಬರ್ 2016 (18:27 IST)
ಗಣೇಶ ವಿಸರ್ಜನೆ ಸಂದರ್ಭದಲ್ಲಿ ದೋಣಿ ಮುಳುಗಿದ ಪರಿಣಾಮವಾಗಿ 12 ಕ್ಕೂ ಹೆಚ್ಚು ಜನರು ನೀರಿನಲ್ಲಿ ಕೊಚ್ಚಿ ಹೋದ ದಾರುಣ ಘಟನೆ ವರದಿಯಾಗಿದೆ. ನೀರಿನಲ್ಲಿ ಕೊಚ್ಚಿ ಹೋದವರು ಬದುಕುಳಿಯುವ ಸಾಧ್ಯತೆಗಳಿಲ್ಲ ಎಂದು ಮೂಲಗಳು ತಿಳಿಸಿವೆ. 
 
ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿಯಲ್ಲಿನ ತುಂಗಭದ್ರ ನದಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜಿಸಲು 35 ಕ್ಕೂ ಹೆಚ್ಚಿನ ಜನ ತೆರಳಿದ್ದಾರೆ. ಮೊದಲಿಗೆ ಚಿಕ್ಕ ಮೂರ್ತಿಯನ್ನು ವಿಸರ್ಜಿಸಿದ ನಂತರ ದೊಡ್ಡ ಮೂರ್ತಿಯನ್ನು ವಿಸರ್ಜಿಸುವ ಸಂದರ್ಭದಲ್ಲಿ ದೋಣಿ ಮುಗುಚಿದ್ದರಿಂದ ನದಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅದರಲ್ಲಿ ಕೆಲವರು ಈಜಿ ದಡ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  
 
ಘಟನೆಯ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ನೀರಿನಲ್ಲಿ ಕೊಚ್ಚಿ ಹೋದವರ ಸುಳಿವು ದೊರೆತಿಲ್ಲ. ಮಂಜು, ಶಿವು, ವೀರಭದ್ರ ಎನ್ನುವವರ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments