Publish Date: Sun, 01 Oct 2023 (17:45 IST)
Updated Date: Sun, 01 Oct 2023 (16:54 IST)
ಈಶಾನ್ಯ ದೆಹಲಿಯ ಆಮ್ ಆದ್ಮಿ ಪಕ್ಷದ 20 ಕ್ಕೂ ಹೆಚ್ಚು ನಾಯಕರು ಮತ್ತು ಪದಾಧಿಕಾರಿಗಳು ಅಧಿಕೃತವಾಗಿ ಕಾಂಗ್ರೆಸ್ಗೆ ಸೇರಿದ್ದು, ಈ ಮೂಲಕ ಆಫ್ಗೆ ಶಾಕ್ ನೀಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನವರು ಕೈ ಪಕ್ಷವನ್ನು ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.ಈ ಗುಂಪಿನಲ್ಲಿ ದೆಹಲಿ ಕಾಂಗ್ರೆಸ್ನ ಮಾಜಿ ಕಾರ್ಯದರ್ಶಿಗಳಾದ ಕುಲದೀಪ್ ಭಾಟಿ ಮತ್ತು ಯೋಗೇಂದ್ರ ಭಾಟಿ ಹಾಗೂ ಬ್ಲಾಕ್ ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್ ಸೇರಿದ್ದಾರೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷ ಸೇರಲು ಎಎಪಿ ಅನ್ನು ತೊರೆದಿದ್ದಾರೆ. ಕಾಂಗ್ರೆಸ್ನ ದೆಹಲಿ ಘಟಕದ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತೃ ಪಕ್ಷಕ್ಕೆ ವಾಪಸಾಗುವಂತೆ ಕರೆ ನೀಡಿದ್ದಾರೆ.