ಮೇಲ್ಸೇತುವೆ ಬೇಡ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ 2000ಕ್ಕೂ ಹೆಚ್ಚು ಮಕ್ಕಳು

Webdunia
ಭಾನುವಾರ, 29 ಜನವರಿ 2023 (17:37 IST)
ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಹಲವು ಯೋಜನೆಗಳು ಪರಿಸರಕ್ಕೆ ಹಾನಿಕಾರಕ ಎಂದು ಜನರು ವಿರೋಧ ವ್ಯಕ್ತಪಡಿಸಿದರೂ ಸರ್ಕಾರ ಅದಕ್ಕೆ ಕಿಂಚಿತ್ತೂ ಕಿಮ್ಮತ್ತು ಕೊಡುತ್ತಿಲ್ಲ.ಅಂತಹದ್ದೇ ಒಂದು ಬೆಂಗಳೂರಿನ ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಮೇಲ್ಸೇತುವೆ ಯೋಜನೆ ಇದೀಗಾ ಜನರ ಆಕ್ರೋಶಕ್ಕೆ ಕಾರಣವಾಗಿದೆ.
 
ಬೆಂಗಳೂರು ಅಭಿವೃದ್ಧಿಗೆಂದು ಬಿಬಿಎಂಪಿ ಕಡೆಯಿಂದ ಸಾಕಷ್ಟು ಯೋಜನೆಗಳು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದೆ. ಆದ್ರೆ ಎಲ್ಲೋ ಒಂದೆಡೆ ಇದು ನಮ್ಮ ಗಾರ್ಡನ್ ಸಿಟಿಯ ಹಸಿರನ್ನು ನಾಶಮಾಡಲು ಹೊರಟಿದೆ. ಇದನ್ನು ಕಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ . ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೊಸದಾಗಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ಹೊರಟಿದೆ. ಇದಕ್ಕೆಂದು ಸರಿ ಸುಮಾರು 50-60 ಮರಗಳ ಮಾರಣವಾಗುತ್ತದೆ ಎಂದು ತಿಳಿದಿದೆ. ಇದನ್ನು ಕೇಳಿದ ಸ್ಥಳೀಯರು ಆಕ್ರೋಶಗೊಂಡಿದ್ದಾರೆ
 
ಯೋಜನೆ ಪರಿಸರಕ್ಕೆ ಮಾರಕ ಎಂದು ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು, ಸ್ಥಳಿಯರ ಜೊತೆಗೆ ಈಗ ಶಾಲಾ ಮಕ್ಕಳು ಸಹ ಸ್ಯಾಂಕಿ ಕೆರೆ ಉಳಿವಿಗಾಗಿ ಪಣ ತೊಟ್ಟಿದ್ದಾರೆ.ನಗರದ ಸುಮಾರು 2000ಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
 
 ಪತ್ರದಲ್ಲಿ, " ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ" ಎಂದು ಬರೆಯಲಲಾಗಿದೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ಇದಕ್ಕೆ ಪರಿಸರವಾದಿಗಳು ಸೇರಿದಂತೆ ಸ್ಥಳಿಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments