Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರ ಮೇಲೆ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಡೆಸಲಿದ್ದಾರೆ- ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 28 ಮಾರ್ಚ್ 2019 (10:05 IST)
ಮಂಡ್ಯ : ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

 ಐಟಿ ಇಲಾಖೆಯ ಬಾಲಕೃಷ್ಣ (ಐಆರ್ ಎಸ್ ಅಧಿಕಾರಿ) ಎಂಬವರ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ತೆಗೆದುಕೊಳ್ಳುತ್ತಾರೆ. ಆದರೆ ಅದನ್ನು ಬಿಟ್ಟು ಕೇಂದ್ರದ ಸಿಆರ್ ಪಿಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ. ಕೇಂದ್ರ ಸರ್ಕಾರದ ಬಿಜೆಪಿ ಪರ ಬಾಲಕೃಷ್ಣ ಅವರು ಬೆಳಗ್ಗೆ 5 ಗಂಟೆಗೆ ದಾಳಿ ಮಾಡಲು ಸಿದ್ಧರಾಗಿದ್ದು, ಇಂತಹ ದಾಳಿಗಳು ನಡೆದರೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments