Webdunia - Bharat's app for daily news and videos

Install App

ತಮಿಳುನಾಡಿಗೆ ಮತ್ತಷ್ಟು ನೀರು : ಕುಸಿದ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ

Webdunia
ಸೋಮವಾರ, 21 ಆಗಸ್ಟ್ 2023 (11:28 IST)
ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರನ್ನು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 105 ಅಡಿಗೆ ಕುಸಿತ ಕಂಡಿದೆ. ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಕೈಕಟ್ಟಿ ಕುಳಿತಿದೆ.

ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ಕಾವೇರಿ ಕೊಳ್ಳದ ರೈತರಲ್ಲಿ ಕಾವೇರಿ ಒಡಲು ಬರಿದಾಗುವ ಆತಂಕ ಮೂಡಿದೆ. ರಾಜ್ಯ ಸರ್ಕಾರ ಅನ್ನದಾತರ ಮಾತಿಗೂ ಕ್ಯಾರೆ ಎನ್ನದ ಹಿನ್ನೆಲೆ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹಲವೆಡೆ ಪ್ರತಿಭಟನೆ ಮುಂದುವರಿದಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಈ ಹೋರಾಟದ ನಡುವೆಯೂ ಇಂದು ಕೂಡಾ ತಮಿಳುನಾಡಿಗೆ 12,631 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಡ್ಯಾಂನಿಂದ ಒಟ್ಟಾರೆ 15,247 ಕ್ಯೂಸೆಕ್ ಹೊರಹರಿವಿದೆ. ಅಷ್ಟಾಗಿ ಒಳಹರಿವು ಪ್ರಮಾಣ ಏರಿಕೆ ಕಾಣಿಸುತ್ತಿಲ್ಲ. ಕೆಆರ್ಎಸ್ ಡ್ಯಾಂಗೆ ಕೇವಲ 4,983 ಕ್ಯೂಸೆಕ್ ನೀರು ಮಾತ್ರವೇ ಹರಿದು ಬರುತ್ತಿದೆ.
 
ಇಂದಿನ ನೀರಿನ ಮಟ್ಟ


ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 105.70 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 27.617 ಟಿಎಂಸಿ
ಒಳ ಹರಿವು – 4983 ಕ್ಯೂಸೆಕ್
ಹೊರ ಹರಿವು – 15,247 ಕ್ಯೂಸೆಕ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments