ಬೆಳ್ಳಗೆ ಸೆಕ್ಯುರಿಟಿ ಗಾರ್ಡ್ ರಾತ್ರಿ ಕಳ್ಳ...!!!

Webdunia
ಗುರುವಾರ, 14 ಜುಲೈ 2022 (14:02 IST)
25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಭದ್ರತಾ ಸಿಬ್ಬಂದಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
 
ಲಗ್ಗೆರೆಯ ಕೆಂಪೇಗೌಡ ಲೇಔಟ್ ನಿವಾಸಿ ಶ್ರೀನಿವಾಸ್ (39) ಬಂಧಿತ ಆರೋಪಿ. ಬೆಳಗ್ಗೆ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು,ರಾತ್ರಿ ವೇಳೆ ಡುಪ್ಲಿಕೇಟ್ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ.
ಜೂನ್ 22 ರಂದು ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಬೈಕ್ ಕಳೆದುಕೊಂಡ ವ್ಯಕ್ತಿಯೊಬ್ಬರು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ ನಂತರ ಶ್ರೀನಿವಾಸ್ ನನ್ನು ಬಂಧಿಸಲಾಗಿದೆ. ದುಶ್ಚಟಗಳಿಗೆ ದಾಸನಾಗಿದ್ದ ಆತನಿಗೆ ಬರುತ್ತಿದ್ದ ಸಂಬಳ ಸಾಕಾಗುತ್ತಿರಲಿಲ್ಲ, ಹೀಗಾಗಿ ಕಳ್ಳತನ ಮಾಡುತ್ತಿದ್ದಾಗಿ ಹೇಳಿದ್ದಾನೆ.
 
ಕದ್ದ ಬೈಕ್ ಗಳನ್ನು ತಾನು ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ವ್ಯಾಪಾರಿ ಎಂದು ಹೇಳಿಕೊಂಡು ಕೋಲಾರ ಮತ್ತು ಆಂಧ್ರಪ್ರದೇಶದ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ. ಹಣ ವಸೂಲಿ ಮಾಡಿದ ನಂತರ ವಾಹನದ ದಾಖಲೆಗಳನ್ನು ನೀಡುತ್ತಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments