Webdunia - Bharat's app for daily news and videos

Install App

ಮಸೀದಿಯಲ್ಲಿ ದೇಶ ವಿರೋಧಿ ಘೋಷಣೆ

Webdunia
ಶನಿವಾರ, 9 ಏಪ್ರಿಲ್ 2022 (18:29 IST)
ಜಾಮಿಯಾ ಮಸೀದಿಯೊಳಗೆ ಶುಕ್ರವಾರ ಪ್ರಾರ್ಥನೆ ವೇಳೆ ದೇಶ ವಿರೋಧಿ ಮತ್ತು ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
 
ಶ್ರೀನಗರ ಪೊಲೀಸರು ನಿನ್ನೆ ಜಾಮಿಯಾ ಮಸೀದಿ ಆವರಣದಲ್ಲಿ ಗೂಂಡಾಗಿರಿ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ 13 ಆರೋಪಿಗಳ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
 
ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಡ್ಡಿಪಡಿಸಿ, ಹಾಜರಾದವರನ್ನು ಪ್ರಚೋದಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡಲು ಪಾಕಿಸ್ಥಾನಿ ಭಯೋತ್ಪಾದಕ ಸಂಘಟನೆಗಳ ನಿರ್ವಾಹಕರಿಂದ ಉತ್ತಮ ಯೋಜಿತ ಸಂಚಿನ ಭಾಗವಾಗಿದೆ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ' ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
 
ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಯುವಕರು ಪೊಲೀಸರು ಮತ್ತು ಕೆಲವರ ಆಕ್ಷೇಪದ ಬಳಿಕ 2-3 ನಿಮಿಷಗಳಲ್ಲಿ ಸ್ಥಳದಿಂದ ಪಲಾಯನ ಗೈದಿದ್ದರು.
 
ಭದ್ರತಾ ಪರಿಸ್ಥಿತಿಯನ್ನು ಕಾಪಾಡುವ ಬಗ್ಗೆ ಭದ್ರತೆ ಮತ್ತು ಅರೆಸೇನಾ ಪಡೆಗಳು ಜಾಗರೂಕವಾಗಿವೆ. ಯಾವುದೇ ಧರ್ಮದ ದೇಗುಲ, ಚರ್ಚ್, ಮಸೀದಿ, ಮಂದಿರ ಅಥವಾ ಗುರುದ್ವಾರವಾಗಿರಲಿ ಸುರಕ್ಷಿತವಾಗಿರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಾರಾಮುಲ್ಲಾ ಜಿಲ್ಲೆಯ ಪಟ್ಟನ್‌ನಲ್ಲಿ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments